ದಿನದ ಅಪರಾಧಗಳ ಪಕ್ಷಿನೋಟ ೨೩ ನೇ ಜನವರಿ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ೦೨

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾನಭಂಗ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಸಂಗನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೦೧-೨೦೦೮ ರಂದು ೦೮೦೦ ಗಂಟೆ ಸಮಯದಲ್ಲಿ ಸಂಗನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಮಂಜುಳ (೨೨) ಕೋಂ ನಾರಾಯಣಸ್ವಾಮಿ ಎಂಬುವರು ತಮ್ಮ ಮನೆಯಲ್ಲಿರುವಾಗ, ಆದೇ ಗ್ರಾಮದ ವಾಸಿ ಶ್ರೀರಾಮ(೨೮) ಎಂಬುವರು ಮಂಜುಳ ರವರ ಮನೆಗೆ ಅತಿಕ್ರಮ ಪ್ರವೇಶ ಮಾಡಿ, ಕೈ ಗಳಿಂದ ಹೊಡೆದು, ಮಾನಭಂಗ ಮಾಡಲು ಪ್ರಯತ್ನಿಸಿರುತ್ತಾರೆ.
  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ವಿವೇಕಾನಂದ ನಗರದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ವಿವೇಕಾನಂದ ನಗರದ ವಾಸಿ ಶ್ರೀಮತಿ ಮುನಿರತ್ನಮ್ಮ ಎಂಬುವರಿಗೆ ದಿನಾಂಕ ೧೬-೧೨-೧೯೯೭ ರಂದು ಹಿಂದೂ ಸಾಂಪ್ರದಾಯದಂತೆ ಶ್ರೀ ಎಸ್.ವಿ.ರಾಮೇಗೌಡ ಎಂಬುವರೊಂದಿಗೆ ಮದುವೆಯಾಗಿತ್ತು. ರಾಮೇಗೌಡರು ಬೂ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ನಂತರ ಡಿಸೆಂಬರ್ ೨೦೦೫ ರಂದು ನಿವೃತ್ತಿ ಹೊಂದಿ, ಅಂದಿನಿಂದ ಮುನಿರತ್ನಮ್ಮ ರವರಿಗೆ ಚಿತ್ರ ಹಿಂಸೆ ನೀಡುತ್ತಿದ್ದು, ದಿನಾಂಕ ೧೨-೧೨-೨೦೦೭ ರಂದು ಅವಾಚ್ಯ ಶಬ್ದಗಳಿಂದ ಬೈದು, ಹೊಡೆದು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಾ ಚಾಕುವನ್ನು ತೋರಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾಟಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ಟೌನ್ ಕೋಲಾರ ಮುಖ್ಯ ರಸ್ತೆ ಕಿಂಗ್ ವೇ ಬ್ರಿಡ್ಜ್ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೦೧-೨೦೦೮ ರಂದು ೨೧೫೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಆನಂದಗಿರಿ ವಾಸಿ ಶ್ರೀ ರಮೇಶ್ (೨೭) ಎಂಬುವರು ತಮ್ಮ ಆಟೋ ಸಂಖ್ಯೆ ಕೆಎ-೦೪-೪೧೯ ವಾಹನವನ್ನು ಕಿಂಗ್ ವೇ ಬ್ರಿಡ್ಜ್ ಬಳಿ ಚಲಾಯಿಸಿಕೊಂಡು ಬರುತ್ತಿದ್ದರು. ಸಮುದಲ್ಲಿ ಎದರುಗಡೆಯಿಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೮-ಟಿ-೨೨೯೫ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಟ್ರಾಕ್ಟರ್ ಅನ್ನು ಚಲಾಯಿಸಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದ ಪ್ರಯುಕ್ತ ಆಟೋ ಜಕ್ಕಂಗೊಂಡಿರುತ್ತೆ ಮತ್ತು ಆಟೋ ಚಾಲಕ ರಮೇಶ್ ರವರ ತಲೆ ಮತ್ತು ಹಣೆಯ ಮೇಲೆ ರಕ್ತಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ನೆರನಹಳ್ಳಿ ಗ್ರಾಮದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೧-೦೧-೨೦೦೮ ರಂದು ೦೭೦೦ ಗಂಟೆ ಸಮಯದಲ್ಲಿ ನೆರನಹಳ್ಳಿ ವಾಸಿ ಶ್ರೀ ಆಂಜನೇಯಗೌಡ (೩೭) ಎಂಬುವರು ತನ್ನ ತೋಟದ ಬಳಿ ಹೋಗುತ್ತಿದ್ದಾಗ ಆದೇ ಗ್ರಾಮದ ವಾಸಿಗಳಾದ ಶ್ರೀರಾಮಪ್ಪ, ಲಕ್ಷ್ಮಣಗೌಡ, ಅಂಜಪ್ಪಗೌಡ, ನಾರಯಣಸ್ವಾಮಿಗೌಡ ಮತ್ತು ಗೋಪಾಲಗೌಡ ರವರುಗಳು ಉದ್ದೇಶಪೂರ್ವಕವಾಗಿ ಅಕ್ರಮ ಕೂಟ ಕಟ್ಟಿಕೊಂಡು ಕೈಗಳಲ್ಲಿ ದೊಣ್ಣೆಗಳನ್ನು ಹಿಡಿದುಕೊಂಡು ಆಂಜನೇಯಗೌಡ ರವರ ಬಲಗಾಲಿಗೆ ಹೊಡೆದು ರಕ್ತಗಾಯಪಡಿಸಿ, ಕಾಲುಗಳಿಂದ ಒದ್ದು, ಕೈಗಳಿಂದ ಮೈ ಮೇಲೆ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply