ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ಜನವರಿ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೧-೨೦೦೮ ರಂದು ೧೩೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಮಲ್ಲಂಗುರ್ಕಿ ಗ್ರಾಮದ ವಾಸಿ ಮುನಿವೆಂಕಟಪ್ಪ ಎಂಬುವರು ಟಿ.ವಿ.ಎಸ್. ಎಕ್ಸೆಲ್ ನಂ. ಕೆಎ-೪೦--೭೧೧೧ ರಲ್ಲಿ ಬಂಗಾರಪೇಟೆ ತಾಲೂಕು ದೇಶಿಹಳ್ಳಿ ಗ್ರಾಮದ ರಾಮಕೃಷ್ಣಪ್ಪ ಎಂಬುವರ ತೋಟದ ಬಳಿ ಬರುತ್ತಿದ್ದರು. ಸಮಯದಲ್ಲಿ ಲಗ್ಗೇಜ್ ಆಟೋ ನಂ. ಟಿಎನ್-೨೪-೫೨೧೨ರ ಚಾಲಕ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಟಿ.ವಿ.ಎಸ್.ಎಕ್ಸೆಲ್‌ಗೆ ಡಿಕ್ಕಿಪಡಿಸಿದ ಪ್ರಯುಕ್ತ ಮುನಿವೆಂಕಟಪ್ಪ ಎಂಬುವರಿಗೆ ರಕ್ತಗಾಯಗಳಾಗಿರುತ್ತದೆ.
  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೮ ರಂದು ೦೯೩೫ ಗಂಟೆ ಸಮಯದಲ್ಲಿ ಕೋಲಾರ ಜಯನಗರದ ವಾಸಿ ಶ್ರೀನಿವಾಸಯ್ಯಶೆಟ್ಟಿ ಎಂಬುವರು ಬಂಗಾರಪೇಟೆಯ ಜೆ.ಎಂ.ಎಫ್.ಸಿ.ನ್ಯಾಯಾಲಯದ ಮುಂದೆ ಅಲ್ಟೋ ಕಾರ್ ನಂ. ಕೆಎ-೦೭-ಎಂ-೧೯೮೨ರಲ್ಲಿ ಬರುತ್ತಿದ್ದರು. ಸಮಯದಲ್ಲಿ ಕೋಲಾರ ಜಿಲ್ಲೆ ಎಂ.ಮಲ್ಲಾಂಡಹಳ್ಳಿ ಗ್ರಾಮದ ವಾಸಿ ಮಂಜುನಾಥ ಎಂಬುವರು ಲಾರಿ ಸಂಖ್ಯೆ ಕೆಎ-೦೨-ಬಿ-೭೯೨ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಕಾರಿನ ಹಿಂಬದಿಯಲ್ಲಿ ಡಿಕ್ಕಿ ಹೊಡೆದು ಕಾರ್ ಹಿಂಭಾಗ dRAUÉÆArgÀÄvÀÛzÉ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: E®è

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತೆ ಕ್ರಮಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೮ ರಂದು ೦೩೩೦ ಗಂಟೆ ಸಮಯದಲ್ಲಿ ಉರಿಗಾಂ ಪೊಲೀಸ್ ಠಾಣೆಯ .ಎಸ್.. ಆದೆಪ್ಪ .ಕೆ. ಮತ್ತು ಪಿ.ಸಿ. ಮಂಜುನಾಥ ಎಂಬುವರುಗಳು ಕೆ.ಜಿ.ಎಫ್. ಸ್ಕೂಲ್ ಆಫ್ ಮೈನ್ಸ್ ಮೈನ್ ಗೇಟ್ ಬಳಿ ಬಂದಿರುತ್ತಾರೆ. ಸಮಯದಲ್ಲಿ ಕೆ.ಜಿ.ಎಫ್. ಬಿ.ಜಿಎಂ.ಎಲ್.ಓಲ್ಡ್ ಡಿಸ್ಪೆನ್ಸೆರಿ ಕ್ವಾರ್ಟರಸ್ ವಾಸಿ ಪರಿರಾಜ್ @ ಕುಟ್ಟಿ ಎಂಬುವರು ಪೊಲೀಸರನ್ನು ಕಂಡು ಓಡಲು ಪ್ರಯತ್ನಿಸಿದರು. ಆಗ ಪೊಲೀಸರು ಹಿಡಿದು ಅವೇಳೆಯಲ್ಲಿ ಸ್ಥಳದಲ್ಲಿ ಇರಲು ಕಾರಣ ಕೇಳಿದಾಗ ಸರಿಯಾದ ಉತ್ತರ ನೀಡಿರುವುದಿಲ್ಲ. ಪರಿರಾಜ್ ರವರನ್ನು ಪೊಲೀಸ್ ಠಾಣೆಗೆ ಕರೆತಂದು ಕಳವು ಮಾಡುವ ಉದ್ದೇಶದಿಂದ ಹೊಂಚುಹಾಕುತ್ತಿರುವೆನೆಂತ ಗುಮಾನಿ ಬಂದು ಕೇಸು ದಾಖಲು ಮಾಡಿರುತ್ತದೆ.

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply