ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ನಲ್ಲಿ ಕಳ್ಳತನ ಮಾಡಲು ಪ್ರಯತ್ನ ಮಾಡಿರುವ ಬಗ್ಗೆ ಅಪರಾಧ ಪ್ರಕರಣದ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಪಟ್ಟಣದ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೪-೦೩-೨೦೦೮ ರಂದು ೧೧೨೦ ಗಂಟೆ ಸಮಯದಲ್ಲಿ ಶ್ರೀ. ರಾಜ ಬಿನ್ ಆದಿಕಾಲ್(೩೬) ಮಮೋಡಿ ಹಳ್ಳಿ ಗ್ರಾಮ, ಕರೂರು ಜಿಲ್ಲೆ, ತಮಿಳು ನಾಡು ಎಂಬುವನ್ನು ಕೆನರಾ ಬ್ಯಾಂಕ್ ಕ್ಯಾಷ್ ಕೌಂಟರ್ನಲ್ಲಿ ನಗದನ್ನು ಕಳ್ಳತನ ಮಾಡಲು ಪ್ರಯತ್ನಿಸಿರುತ್ತಾನೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣವು ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಬಸ್ಸ್ ನಿಲ್ದಾಣದಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೩-೦೩-೨೦೦೮ ರಂದು ೧೪೧೫ ಗಂಟೆ ಸಮಯದಲ್ಲಿ ಕೆ.ಎಸ್.ಅರ್.ಟಿ.ಸಿ. ಬಸ್ಸ್ ಸಂಖ್ಯೆ ಕೆಎ-೦೭-ಎಫ್-೧೦೧೫ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಜಪ್ಪ(೩೬) ಬ್ಯಾಟರಾಯಹಳ್ಳಿ ಎಂಬುವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ರಕ್ತಗಾಯಗಳಾಗಿರುತ್ತದೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣವು ದಾಖಲಾಗಿರುತ್ತದೆ. ಈ ಕೃತ್ಯವು ಹುದುಕುಳ ಗ್ರಾಮದ ಬಳಿ ರಸ್ತೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೪-೦೩-೨೦೦೮ ರಂದು ೦೭೦೦ ಗಂಟೆಯ ಸಮಯದಲ್ಲಿ ತಿಮ್ಮನಾಯಕನಹಳ್ಳಿ ವಾಸಿ ತಿಮ್ಮರಾಯಪ್ಪ ಬಿನ್ ವೆಂಕಟರಾಮ(೩೫) ರವರು ತನ್ನ ವಾಹನ ಸಂಖ್ಯೆ ಕೆಎ-೪೨-ಇ-೨೬೨ ರನ್ನು ಬಂಗಾರಪೇಟೆ ಕಡೆಯಿಂದ ಕೋಲಾರ ಕಡೆಗೆ ಹೋಗುತ್ತಿದ್ದಾಗ ಕೋಲಾರ ಕಡೆಯಿಂದ ಮಂಜುನಾಥ ಬಿನ್ ರಾಮಪ್ಪ (೨೧) ಎಂಬುವನ್ನು ತನ್ನ ವಾಹನ ಪಲ್ಸ್ ರ್ ಸಂಖ್ಯೆ ಟಿಎನ್-೨೪-ಜೆಡ್ಜ್-೭೪೩೨ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡದ ಪ್ರಯುಕ್ತ ತಿಮ್ಮರಾಯಪ್ಪ ರವರಿಗೆ ಎಡಕಾಲು ಮುರಿದು, ರಕ್ತಗಾಯಗಳಾಗಿರುತ್ತವೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


