ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೪-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೨
-
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಕೆಂಪಾಪುರ ಗ್ರಾಮದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೦೪-೨೦೦೮ ರಂದು ೦೫೩೦ ಗಂಟೆ ಸಮಯದಲ್ಲಿ ಕೆಂಪಾಪುರ ಗ್ರಾಮದ ವಾಸಿ ಕುಮಾರಿ ಉಷಾ (೧೬) ಬಿನ್ ನಂಜುಂಡಪ್ಪ ಎಂಬುವಳು ಮನೆಯಲ್ಲಿ ಮಲಗಿದ್ದವಳು ಕಾಣೆಯಾಗಿರುತ್ತಾಳೆ. ಸ್ನೇಹಿತರ ಮತ್ತು ನೆಂಟರಿಷ್ಠರ ಮನೆಗಳಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. ಕಾಣೆಯಾದ ಹುಡುಗಿಯ ಚಹರೆ ಈ ರೀತಿ ಇರುತ್ತದೆ. ಹೆಸರು: ಉಷಾ, ವಯಸ್ಸು ೧೬, ಬಣ್ಣ: ಕಪ್ಪು, ಕೋಲು ಮುಖ, ಸಾದಾರಣ ಮೈಕಟ್ಟು, ಕಪ್ಪು ಕೂದಲು, ಉಡುಪು: ರೋಸ್ ಬಣ್ಣದ ಟಾಫ್ ಮತ್ತು ನೀಲಿ ಬಣ್ಣದ ಚೂಡಿದಾರ್, ಬಾಷೆ ಕನ್ನಡ, ತೆಲಗು ತಮಿಳು ಮತ್ತು ಹಿಂದಿ ಮಾತನಾಡುತ್ತಾಳೆ
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್. ಆಂಡ್ರಸನ್ಪೇಟೆಯ ಮಸ್ಕಂ ಇ-ಬ್ಲಾಕ್ ನಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೫-೦೪-೨೦೦೮ ರಂದು ೦೬೩೦ ಗಂಟೆ ಸಮಯದಲ್ಲಿ ಕುಮಾರಿ ಸಿಮಲಿ (೧೭) ಬಿನ್ ಇಸಾಕ್ ಇ ಬ್ಲಾಕ್ (ಸುಬಾಷಣಿ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದು) ಎಂಬುವರು ಸುಸೈಪಾಳ್ಯಂನ ಅವರ ಮನೆಯಿಂದ ಚರ್ಚ್ಗೆ ಹೋಗಿ ಬರುತ್ತೇನೆಂದು ಅವರ ಕೇರಿಯಲ್ಲಿರುವ ಸೆಂಟ್ ಜೋಸೆಫ್ ಚರ್ಚ್ಗೆ ಹೋದವಳು ಮತ್ತೆ ವಾಪಸ್ಸು ಮನೆಗೆ ಬರದೇ ಕಾಣೆಯಾಗಿರುತ್ತಾರೆ. ಅದೇ ಕೇರಿಯ ವಾಸಿ ಆಲ್ವಿನ್ ಬಿನ್ ಭರತ್ಲೋಮ್ ಎಂಬಾತನು ಸಹ ಊರಿನಲ್ಲಿ ಇಲ್ಲದಿದ್ದರಿಂದ ಆತನೊಂದಿಗೆ ಹೋಗಿರಬಹುದೆಂದು ಗುಮಾನಿ ಇರುತ್ತದೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


