ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಮೇ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೫-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೨

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ದಳವಾಯಿಹೊಸಹಳ್ಳಿ ಗ್ರಾಮದ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೦-೦೫-೨೦೦೮ ರಂದು ೨೨೦೦ ಗಂಟೆ ಸಮಯದಲ್ಲಿ ದಳವಾಹಿಹೊಸಹಳ್ಳಿ ಗ್ರಾಮದ ವಾಸಿ ಅಶ್ವತ್ಥಪ್ಪ ಬಿನ್ ಈರಪ್ಪ ನವರ ತೋಟದ ಜಮೀನಿನಲ್ಲಿರುವ ಕೊಳವೆ ಬಾವಿಗೆ ಅಳವಡಿಸಿದ್ದ ೭೦ ಮೀಟರ್‍ ಕೇಬಲ್ ವೈರ್‍ ಬೆಲೆ ಸುಮಾರು ೫,೬೦೦ ರೂ ಬೆಲೆ ಬಾಳುವುದನ್ನು ಯಾರೋ ಅಪರಿಚಿತ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.
  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಎ ಮೋತಕಪಲ್ಲಿ ಗ್ರಾಮದ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೧-೦೫-೨೦೦೮ ರಂದು ೨೨೦೦ ರಾತ್ರಿ ಸಮಯದಲ್ಲಿ ಎ ಮೋತಕಪಲ್ಲಿ ಗ್ರಾಮದ ವಾಸಿ ಕುಪ್ಪಯ್ಯ ನಾಯ್ಡು ನವರ ತೋಟದ ಜಮೀನಿನಲ್ಲಿರುವ ಕೊಳವೆ ಬಾವಿಗೆ ಅಳವಡಿಸಿದ್ದ ೧೦೦ ಮೀಟರ್‍ ಕೇಬಲ್ ವೈರ್‍ ಬೆಲೆ ಸುಮಾರು ೧೧,೨೦೦/- ರೂ ಬೆಲೆ ಬಾಳುವುದನ್ನು ಯಾರೋ ಅಪರಿಚಿತ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೩

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ನಾಗಲಾಹಳ್ಳಿ ಗ್ರಾಮದ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೦೫-೨೦೦೮ ರಂದು ೧೬೦೦ ಗಂಟೆ ಸಮಯದಲ್ಲಿ ಕ್ಯಾಸಂಬಳ್ಳ ಗ್ರಾಮದ ವಾಸಿ ಶ್ರೀರಾಮಪ್ಪ ಬಿನ್ ವೆಂಕಟೇಶಪ್ಪ ಎಂಬುವರು ತನ್ನ ತಮ್ಮನ ಮಗಳ ಮದುವೆ ಪ್ರಯುಕ್ತ ಬಳುವನಹಳ್ಳಿ ಗ್ರಾಮದ ಕೇಶವಗೌಡ ಎಂಬುವರ ಟ್ರಾಕ್ಟರ್‍ ಸಂಕ್ಯೆ ಕೆಎ-೦೮-ಟಿ-೪೨೫ ರಲ್ಲಿ ಮದುವೆ ಸಾಮಾನುಗಳನ್ನು ಹಾಕಿ ಟ್ರಾಕ್ಟರ್‍ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಟ್ರಾಕ್ಟರ್‍ ಟನ್ನು ಚಲಾಯಿಸಿಕೊಂಡು ಬಂದು ರಸ್ತೆಯ ಹುಬ್ಬರದ ಮೇಲೆ ಚಲಾಯಿಸಿದಾಗ ಟ್ರಾಕ್ಟರ್‌ನಲ್ಲಿದ್ದ ಶ್ರೀರಾಮಪ್ಪ ಕೆಳಕ್ಕೆ ಬಿದ್ದು ಟ್ರಾಕ್ಟರ್‍ ಚಕ್ರ ಎದೆಯ ಮೇಲೆ ಹರಿದು ತೀವ್ರತರಹದ ಗಾಯಗಳಾಗಿ ಆಸ್ಪತ್ರೆಯಲ್ಲಿ ಮೃತರಾಗಿರುತ್ತಾರೆ. 
  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಬೇತಮಂಗಲದ ರೂಪಶ್ರಿ ಚಿತ್ರಮಂದಿರದ ಮುಂಭಾಗ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೭-೦೫-೨೦೦೮ ರಂದು ೦೬೦೦ ಗಂಟೆ ಸಮಯದಲ್ಲಿ ಪೋತರಾಜನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಮುನಿಯಮ್ಮ ರೂಪಶ್ರಿ ಚಿತ್ರಮಂದಿರ ಮುಂಭಾಗದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೇತಮಂಗಲದ ಶ್ರೀರಾಮ ಎಂಬುವರು ತನ್ನ ಟಿವಿಎಸ್ ಎಕ್ಸೆಲ್ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮುನಿಯಮ್ಮನಿಗೆ ಡಿಕ್ಕಿ ಹೊಡೆದ ಪ್ರಯುಕ್ತ ರಕ್ತಗಾಯವಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಿರುತ್ತಾರೆ. ದಿನಾಂಕ ೨೦-೦೫-೨೦೦೮ ರಂದು ೦೩೧೫ ಗಂಟೆಗೆ ಮುನಿಯಮ್ಮ ನವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರಯಲ್ಲಿ ಮೃತ ಪಟ್ಟಿರುತ್ತಾರೆ.
  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಅನಿಗಾನಹಳ್ಳಿ ಗ್ರಾಮದ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨/೦೫/೨೦೦೮ ರಂದು ೧೫೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ನಾರಾಯಣಪುರ ಗ್ರಾಮದ ವಾಸಿ ಶ್ರೀ ಟಿ.ಶಂಕರಪ್ಪ ನವರ ಮಗಳಾದ ಕುಮಾರಿ ಚಂದ್ರಿಕಾ (೮) ಎಂಬುವಳು ತನ್ನ ಚಿಕ್ಕಮ್ಮನೊಂದಿಗೆ ಬಂಗಾರಪೇಟೆಯ ಜಾತ್ರೆಯನ್ನು ಮುಗಿಸಿಕೊಂಡು ಅನಿಗಾನಹಳ್ಳಿ ಗೇಟ್ ಬಳಿ ಬಸ್ ಇಳಿದು ರಸ್ತೆ ದಾಟುತ್ತಿದ್ದಾಗ ಕೋಲಾರದ ಕಡೆಯಿಂದ ವೆಂಕಟೇಶ್ವರ ಖಾಸಗಿ ಬಸ್ ಸಂಖ್ಯೆ ಕೆಎ-೦೭-ಬಿ-೭೭೭ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಕುಮಾರಿ ಚಂದ್ರಿಕಾಗೆ ಡಿಕ್ಕಿ ಹೊಡೆದ ಪ್ರಯುಕ್ತ ಚಂದ್ರಿಕ ಸ್ಥಳದಲ್ಲಿ ಮೃತಪಟ್ಟಿರುತ್ತಾಳೆ.

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ 

ಇತರೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿಯನ್ನುಂಟು ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆಯ ಜನರಲ್ ಆಸ್ಪತ್ರೆಯ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨/೦೫/೨೦೦೮ ರಂದು ಬಂಗಾರಪೇಟೆ ಅನಿಗಾನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತದಲ್ಲಿ ಕುಮಾರಿ ಚಂದ್ರಿಕಾ ಎಂಬು ಹುಡುಗಿ ಮೃತ ಪಟ್ಟಿದ್ದು, ಈ ಬಗ್ಗೆ ಪಿ.ಎಸ್.ಐ. ರವರ ಅದೇಶದಂತೆ ಮೃತಳ ಚಹರೆ ಗುರುತುಗಳನ್ನು ತರಲು ಬಂಗಾರಪೇಟೆಯ ಜನರಲ್ ಆಸ್ಪತ್ರೆಗೆ ಸಿಹೆಚ್‌ಸಿ ೧೧೯ ಶ್ರೀ ಸಿ.ಎ.ನಾಗರಾಜ್ ಮತ್ತು ಪಿಸಿ ೨೦೩ ಶ್ರೀ ವೇಣುಗೋಪಾಲ್ ರವರು ಹೋದಾಗ ನಾರಾಯಣಪುರ ಗ್ರಾಮದ ವಾಸಿ ರಾಮಪ್ಪ ಎಂಬುವರು ನಾಗರಾಜ್ ರವರೊಂದಿಗೆ ಜಗಳ ತೆಗೆದು ಕಟ್ಟ ಮಾತುಗಳಿಂದ ಬೈದು ಸರ್ಕಾರಿ ಕೆಲಸ ನಿರ್ವಹಿಸುವಾಗ ಕೆಲಸ ನಿರ್ವಹಿಸದಂತೆ ಅಡ್ಡಿಯನ್ನುಂಟು ಮಾಡಿರುತ್ತಾರೆ.  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply