ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಮೇ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೫-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಬೆಮೆಲ್ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ದಾಸರಹೊಸಹಳ್ಳಿಯ ಡೆಕ್ಕನ್ ಹೈಡ್ರಾಲಿಕ್ಸ್ ಪ್ರವೈಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೦೫-೨೦೦೮ ರಿಂದ ೨೪-೦೫-೨೦೦೮ ರ ಮದ್ಯ ಡೆಕ್ಕನ್ ಹೈಡ್ರಾಲಿಕ್ಸ್ ಕಾರ್ಖಾನೆಯಲ್ಲಿ ಸುಮಾರು ೨೦೦೦/- ರೂಗಳು ಬೆಲೆ ಬಾಳುವ ಹತ್ತು ಹೈಡ್ರಾಲಿಕ್ಸ್ ಸಿಲೆಂಡರ್‍ ಬಾಟಂ ಕಳುವಾಗಿದ್ದು, ಅವುಗಳು ದಾಸರಹೊಸಹಳ್ಳಿಯಲ್ಲಿರುವ ಎಸಿಸಿ ಸಿಮೆಂಟ್ ಅಂಗಡಿಯ ಪಕ್ಕದಲ್ಲಿ ಪತ್ತೆಯಾಗಿರುತ್ತದೆ. ಈ ಕಳುವನ್ನು ಎನ್.ಜಗದೀಶ್, ಸೆಕ್ಯೂರಿಟಿ ಗಾರ್ಡ್‌, ಡೆಕ್ಕನ್ ಹೈಡ್ರಾಲಿಕ್ಸ್ ರವರು ಮಾಡಿರಬಹುದೆಂಬ ಗುಮಾನಿ ಬಂದಿರಯತ್ತದೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ಟೌನ್, ದೇಶಿಹಳ್ಳಿಯ ಆರ್‍.ಕೆ.ಎನ್ ಮಿಲ್ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೭-೦೫-೨೦೦೮ ರಂದು ೨೨೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ಬೆಂಗನೂರು ಗ್ರಾಮದ ವಾಸಿ ಶ್ರೀ ಅಶೋಕ (೨೨) ಎಂಬುವರು ಟಿ.ವಿ.ಎಸ್. ವಿಕ್ಟರ್‍ ಸಂಖ್ಯೆ ಕೆಎ-೦೫-ಇಕ್ಯೂ-೮೯೮೫ ವಾಹನದಲ್ಲಿ ಬಂಗಾರಪೇಟೆಗೆ ಬಂದು ತಮ್ಮ ಗ್ರಾಮಕ್ಕೆ ಹೋಗಲು ಬಂಗಾರಪೇಟೆ-ಕೆ.ಜಿ.ಎಫ್ ಮುಖ್ಯ ರಸ್ತೆಯ ದೇಶಿಹಳ್ಳಿ ಬಳಿ ಇರುವ ಆರ್‍.ಕೆ.ಎನ್. ಮಿಲ್ ಬಳಿ ಹೋಗುತ್ತಿದ್ದಾಗ ಎದರುಗಡೆಯಿಂದ ಟೆಂಪೊ ಸಂಖ್ಯೆ ಟಿಎನ್-೨೩-ಎಡಬ್ಲ್ಯೂ-೯೯೮೭ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಅಶೋಕ ರವರ ವಾಹನಕ್ಕೆ ಡಿಕ್ಕಿ ಹೊಡೆದು ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಅವರು ಮೃತ ಮಟ್ಟಿರುತ್ತಾರೆ.   

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ಮಾರಟಕ್ಕೆ  ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್, ಅಶೋಕ್ ನಗರದ ’ಬಿ’ ಬ್ಲಾಕ್ ನಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೮-೦೫-೨೦೦೮ ರಂದು ೧೮೩೦ ಗಂಟೆ ಸಮಯದ ಶ್ರೀ ಲಕ್ಷ್ಮಯ್ಯ, ಪಿ.ಐ., ಡಿ.ಸಿ.ಐ.ಬಿ, ಡಿ.ಪಿ.ಓ, ಕೆ.ಜಿ.ಎಫ್. ರವರಿಗೆ ಬಂಧ ಖಚಿತ ವರ್ತಮಾನದ ಮೇರೆಗೆ ರಾಬರ್ಟ್‌‌ಸನ್‌ಪೇಟೆ ಪಿ.ಎಸ್.ಐ (ಅಪರಾಧ) ಮತ್ತು ಸಿಬ್ಬಂದಿಗಳೊಂದಿಗೆ ಅಶೋಕ ನಗರದ ’ಬಿ’ ಬ್ಲಾಕ್ ವಾಸಿ ರಾಧಮ್ಮ ರವರ ಮನೆಯಲ್ಲಿಟ್ಟಿದ ಸುಮಾರು ೧೫೦ ಲೀಟರನಷ್ಟು ಕೊಳೆಯನ್ನು ನಾಶಪಡಿಸಿ ಮಾರಾಟ ಮಾಡಲು ಪ್ಲಾಸ್ಟಿಕ್ ಕ್ಯಾನಿನಲ್ಲಿಟ್ಟಿದ್ದ ಸುಮಾರು ೩೦ ಲೀಟರ್‌ನಷ್ಷು ಭಟ್ಟಿ ಸಾರಾಯಿಯನ್ನು ಮತ್ತು ಮಡಿಕೆಗಳನ್ನು ಅಮಾನತ್ತುಮಾಡಿಕೋಂಡಿರುತ್ತದೆ. ಆರೋಪಿಯು ಸ್ಥಳದಿಂದ ಪರಾರಿಯಾಗಿರುತ್ತಾರೆ.   

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply