ದಿನದ ಅಪರಾದಗಳ ಪಕ್ಷಿನೋಟ ೩೦ನೇ ಮೇ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೫-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧

  •   ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಮಾನಭಂಗಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕಿನದೊಡ್ಡೂರು ಕರಪನಹಳ್ಳಿ ಗ್ರಾಮದಲ್ಲಿ ದಿನಾಂಕ ೨೯-೦೫-೨೦೦೮ ರಂದು ಮದ್ಯಾಹ್ನ ೧೩೦೦ ಗಂಟೆ ಸಮಯದಲ್ಲಿ ಕು: ಸುಷ್ಮಾ (೧೧) ಬಿನ್ ಪ್ರಹ್ಲಾದ್‌ ರವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿ ಮೂರ್ತಿ ಉರಫ್ ರಾಮಮೂರ್ತಿ ಬಿನ್ ವೆಲ್ಡರ್‍ ಮುನಿಯಪ್ಪ (೨೬) ರವರು ಸದರಿ ಬಾಲಕಿಯನ್ನು ತನ್ನ ಮನೆಯೊಳಕ್ಕೆ ಕರೆದು ಮಾನಭಂಗ ಮಾಡಲು ಪ್ರಯತ್ನಿಸಿ, ಆಕೆ ಕಿರುಚುಕೊಂಡಾಗ ದೊಣ್ಣೆಯನ್ನು ತೋರಿಸಿ ಕಿರುಚಾಡಿದರೆ ಸಾಯಿಸಿ ಬಿಡುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾನೆ. ಸುಷ್ಮಾ ಅಲ್ಲಿಂದ ತಪ್ಪಿಸಿಕೊಂಡು ಓಡಿಹೋಗಿರುತ್ತಾಳೆ.

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೫-೨೦೦೮ ರಂದು ಬೆಳಿಗ್ಗೆ ೧೦೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕಿನ ಕುರೂರು ಗ್ರಾಮದ ಶಾಲೆಯ ಬಳಿ ಅದೇ ಗ್ರಾಮದ ವಾಸಿಗಳಾದ ಮುನಿವೆಂಕಟರೆಡ್ಡಿ ಮತ್ತು ಕಿಟ್ಟಾರೆಡ್ಡಿ ಉರುಫ್ ಕೃಷ್ಣಾರೆಡ್ಡಿ ರವರುಗಳು ಅದೇ ಗ್ರಾಮದ ವಾಸಿಗಳಾದ ರಾಮಚಂದ್ರಾರೆಡ್ಡಿ, ನಾರಾಯಣಮ್ಮ, ಗಂಗಮ್ಮ ರವರುಗಳ ಬಳಿ ಜಮೀನು ಉಳುಮೆ ಮಾಡುವ ವಿಚಾರದಲ್ಲಿ ಜಗಳ ಕಾದು ಕಲ್ಲು ಮತ್ತು ದೊಣ್ಣೆಗಳಿಂದ ೦೩ ಜನರಿಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.
  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೯-೦೫-೨೦೦೮ ರಂದು ಸಂಜೆ ೧೯೩೦ ಗಂಟೆಯಲ್ಲಿ ಆಂಡ್ರಸನ್‌ಪೇಟೆ ಮಾರ್ಕೆಟ್ ಮುಂಭಾಗ ಸುರೇಶ್‌ಬಾಬು ಉರುಫ್ ಅಪ್ಪನ್ (೨೮) ಬಿನ್ ಗಫೂರ್‍ ರವರು ಮಾವಿನಕಾಯಿ ಮಾರುತ್ತಿದ್ದಾಗ ಕುಟ್ಟಿ ಬಿನ್ ವಿಜಯರಾಜ್, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರು ಬಂದಿದ್ದು, ಗಂಡ ಹೆಂಡತಿ ಜಗಳ ವಿಚಾರವಾಗಿ ಸುರೇಶ್‌ಬಾಬು ರವರು ಬುದ್ಧಿ ಹೇಳಿದ್ದಕ್ಕೆ ಕುಟ್ಟಿ ರವರು ಕೋಪಗೊಂಡು ಕೆಟ್ಟ ಮಾತುಗಳಿಂದ ಬೈದು ಒಂದು ಕಟ್ಟಿಗೆಯಿಂದ ತಲೆಯ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.

ಇತರೆ: ಇಲ್ಲ   

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೫-೨೦೦೮ ರಂದು ಬೆಳಿಗ್ಗೆ ೦೬೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕಿನ ಕನಮನಹಳ್ಳಿ ಗ್ರಾಮದ ವಾಸಿ ಮುನಿಯಪ್ಪ ಯಾವುದೇ ಪರವಾನಗಿ ಇಲ್ಲದೆ ಕನಮನಹಳ್ಳಿಗೆ ಹೋಗುವ ಕಾಲುದಾರಿಯಲ್ಲಿ ಒಂದು ಪ್ಲಾಸ್ಟಿಕ್ ಕ್ಯಾನ್‌ನಲ್ಲಿ ಸುಮಾರು ೧೫ ಲೀಟರ್‍ ಕಳ್ಳಬಟ್ಟಿ ಸಾರಾಯಿ ಸಾಗಿಸುತ್ತಿದ್ದಾಗ ಒಡ್ಲಬಂಡಿ ಗ್ರಾಮದ ಸ್ಥಳದಲ್ಲಿ ಮಾಲು ಸಮೇತ ಮುನಿಯಪ್ಪನನ್ನು ಹಿಡಿದು ಕ್ರಮಕೈಗೊಂಡಿರುತ್ತದೆ.
  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೫-೨೦೦೮ ರಂದು ಬಂಗಾರಪೇಟೆ ತಾಲೂಕಿನ ಕಲ್ಲಿಕುಪ್ಪ ಗ್ರಾಮದಲ್ಲಿ  ನಾರಾಯಣಮ್ಮ (೩೮) ಕೋಂ ಲೇಟ್‌ ವೆಂಕಟಸ್ವಾಮಿ ರವರು ಯಾವುದೇ ಪರವಾನಗಿಯಿಲ್ಲದೆ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದವರನ್ನು ಬೇತಮಂಗಲ ಪೊಲೀಸರು ದಸ್ತಗಿರಿ ಮಾಡಿ ಕ್ರಮ ಜರುಗಿಸಿರುತ್ತಾರೆ. ಸುಮಾರು ೪.೫ ಲೀಟರ್‍ ಕಳ್ಳಬಟ್ಟಿ ಸಾರಾಯಿ ಪೊಲೀಸರು ವಶಪಡಿಸಿಕೊಂಡಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply