ದಿನದ ಅಪರಾಧಗಳ ಪಕ್ಷಿನೋಟ ೩೧ನೇ ಜುಲೈ ೨೦೦೮

July 31, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೭-೨೦೦೮ ರಂದು ೨೧೦೦ ಗಂಟೆ ಸಮಯದಲ್ಲಿ ಯಾರೋ ಕಳ್ಳರು ಹುದುಕುಳ ಗ್ರಾಮದ ಸ್ಪೈಸ್ ಕಂಪನಿಯಲ್ಲಿ ಬ್ಯಾಟರಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಬಲೆ ಸುಮಾರು ೧೦,೦೦೦/-ಗಳಾಗಿರುತ್ತದೆ.

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ     

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ  

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ     

ಇತರೆ: ಇಲ್ಲ    

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ     

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ       

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಜುಲೈ ೨೦೦೮

July 30, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ರಾಬರ್ಟ್‌‌ಸನ್‌ಪೇಟೆಯ, ಉರಿಗಾಂಪೇಟೆ, ಬಜಾರ್‍ ರಸ್ತೆಯ ವಾಸಿ ಶ್ರೀಮತಿ ಗೀತಾಲಕ್ಷ್ಮಿ ಮತ್ತು ತಿರುನಾವುಕರಸನ್ ಎಂಬುವರೊಂದಿಗೆ ದಿನಾಂಕ ೩೦-೧೦-೨೦೦೩ ರಂದು ಮದುವೆಯಾಗಿದ್ದು, ಮದುವೆಯಾದ ವಾರದ ನಂತರ ತಿರುನಾವುಕರಸನ್ ತನ್ನ ಪತ್ನಿಯ ಶೀಲದ ಮೇಲೆ ಸಂಶಯವಿದುದ್ದರಿಂದ ಮೈದನಾದ ಸತೀಶ್ ಮತ್ತು ಅತ್ತೆ ವಂಸತ ರವರುಗಳು ಸೇರಿಕೊಂಡು ದೈಹಿಕವಾಗಿ ಕಿರುಕುಳ ನೀಡುತ್ತಿದ್ದು,  ಗೀತಾಲಕ್ಷ್ಮಿ ರವರು ಹೆರಿಗೆಗೆ ತವರು ಮನೆಗೆ ಹೋಗಿದ್ದು ಮೇಲ್ಕಂಡ ಕಾರಣಗಳಿಂದ ವಾಪಸ್ಸು ತನ್ನ ಗಂಡನ ಮನೆಗೆ ಹೋಗಿರುವುದಿಲ್ಲ. ದಿನಾಂಕ ೨೮-೦೭-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಗಾಂಧಿ ವೃತ್ತದ ಬಳಿ ಹೋಗುತ್ತಿದ್ದಾಗ  ತನ್ನ ಗಂಡ ತಿರುನಾವುಕರಸನ್  ಗೀತಾಲಕ್ಷ್ಮಿರವರ ಕತ್ತನ್ನು ಹಿಡಿದು ಗೀತಾಲಕ್ಷ್ಮಿ ಮತ್ತು ಆಕೆಯ ಮಗುವನ್ನು ಸಾಯಿಸದೆ ಬಿಡುವುದಿಲ್ಲವೆಂದು ಪ್ರಾಣ ಬೆದರಿಕೆ ಹಾಕಿರುತ್ತಾರೆ.   

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ     

-ಸಾಧಾರಣ: ಇಲ್ಲ  

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೭-೨೦೦೮ ರಂದು ೦೯೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಚಂಬೇನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಲಕ್ಷ್ಮಿದೇವಮ್ಮ ಕೋಂ ನಗರಾಜ ಎಂಬುವರು ಅದೇ ಗ್ರಾಮದ ಶ್ರೀಮತಿ ಲಕ್ಷಮ್ಮ ಕೋಂ ಮುನಿಯಪ್ಪ ಎಂಬುವರೊಂದಿಗೆ ಏಕಾ ಏಕಿ ಜಗಳ ತೆಗೆದು ಲಕ್ಷಮ್ಮನ್ನು ಕೈಗಳಿಂದ ಹೊಡೆದು, ಕುಡುಗೋಲಿನಿಂದ ಎಡ ಹಣೆಯ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.
  • ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಂಕ ೨೯-೦೭-೨೦೦೮ ರಂದು ೧೦೦೦ ಗಂಟೆ ಸಮಯದಲ್ಲಿ ಡೈಮಂಡ್‌ಗುಡಿಸಿನ ವಾಸಿ ಶ್ರೀ ಪ್ಯಾರುಸಾಬ್ (೭೫) ಎಂಬುವರು ಗರುಡಾದ್ರಹಳ್ಳಿ ದರ್ಗಾ ಹತ್ತಿರ ಇದ್ದಾಗ ಮನೆ ಮಾರಿರುವ ವಿಚಾರದಲ್ಲಿ ಚಾಂದ್‌ಪಾಷ, ಚಲ್ದಿಗಾನಹಳ್ಳಿ ಆನಂತಪ್ಪ ಮತ್ತು ರಹಮತ್ ಎಂಬುವರುಗಳು ಪ್ಯಾರುಸಾಬ್ ಅನ್ನು  ಏಕೋದ್ದೇಶದಿಂದ ಜಗಳಕ್ಕೆ ಹೋಗಿ ಕೆಟ್ಟ ಮಾತುಗಳಿಂದ ಬೈದು ದೊಣ್ಣೆ ಮತ್ತು ಕೈಗಳಿಂದ ಹೊಡೆದಿರುತ್ತಾರೆ.   

ಇತರೆ: ಇಲ್ಲ    

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •    ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನುಷ್ಯ ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೭-೨೦೦೮ ರಂದು ೧೨೩೦ ಗಂಟೆ ಸಮಯದಲ್ಲಿ ರಾಬರ್ಟ್‌‌ಸನ್‌ಪೇಟೆ, ವಿವೇಕನಗರದ ವಾಸಿ ಶ್ರೀಮತಿ ಲಕ್ಷ್ಮಮ್ಮ ಕೋಂ ಕುಪ್ಪಸ್ವಾಮಿ ರವರ ಮಗನಾದ ನಟರಾಜ್ (೨೯) ಎಂಬುವನು ತನ್ನ ಮನೆಯಿಂದ ಹೋದವನು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಗಿರುತ್ತಾನೆ.  

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೭-೨೦೦೮ ರಂದು ೧೯೦೦ ಗಂಟೆ ಸಮಯದಲ್ಲಿ ಮಹಿಳಾ ಎಎಸ್‌ಐ ಶ್ರೀಮತಿ ರೀಟಾ ರವರಿಗೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆ ವೈದ್ಯಾಧಿಕರಿಗಳಿಂದ ಹಾಜರ್‌ ಪಡಿಸಿದ ಸೂಚನೆ ಚೀಟಿ ಸಂಖ್ಯೆ ೮೫೬೧೮೫ ಅನ್ನು ಪರಿಶೀಲಿಸಲಾಗಿ  ಕೆ.ಜಿ.ಎಫ್. ರಾಬರ್ಟ್‌‌ಸನ್‌ಪೇಟೆ, ಉರಿಗಾಂಪೇಟೆ ವಾಸಿ ಶ್ರೀಮತಿ ಆಯುಶಾ ಬಾನು (೩೫) ಎಂಬುವರು ಬೆಂಕಿಯ ಸುಟ್ಟಗಾಯಗಳಿಂದ ದಿನಾಂಕ ೨೮-೦೭-೨೦೦೮ ರಂದು ರಾತ್ರಿ ೨೦೪೦ ಗಂಟೆಯಲ್ಲಿ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.     

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಜುಲೈ ೨೦೦೮

July 29, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ   

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ     

-ಸಾಧಾರಣ: ೦೧

  •    ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಭಮದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೭-೨೦೦೮ ರಂದು ೧೨೧೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಹುಣಕುಲದೊಡ್ಡಿ ಗ್ರಾಮದ ವಾಸಿ ಶ್ರೀ ನಾರಾಯಣಸ್ವಾಮಿ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೪-ಇಡಿ-೮೫೫೫ ರಲ್ಲಿ ಹಿಂದೆ ಕುಮ್ಮರೆಡ್ಡಿ ಗ್ರಾಮದ ವಾಸಿ ವೆಂಕಟರಾಮಪ್ಪ ಎಂಬುವರನ್ನು ಕುಳ್ಳರಿಸಿಕೊಂಡು ಬಂಗಾರಪೇಟೆ-ಕೆ.ಜಿ.ಎಫ್. ಮುಖ್ಯ ರಸ್ತೆಯ ಜಿಲ್ಲಾ ಪಂಚಾಯತ್ ಕಛೇರಿ ಮುಂಭಾಗ ಬರುತ್ತಿರುವಾಗ ಎದರುಗಡೆಯಿಂದ ನಾಗಾರ್ಜುನ ಬಸ್‌ ಸಂಖ್ಯೆ ಕೆಎ-೦೧-ಸಿ-೯೮೩ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ನಾರಾಯಣಸ್ವಾಮಿ ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ನಾರಾಯಣಸ್ವಾಮಿ ರವರಿಗೆ ಎಡಗಾಲು ಮುರಿದು ಮತ್ತು ವೆಂಕಟರಾಮಪ್ಪನವರಿಗೆ ತಲೆಯ ಹಿಂಬಾಗ ರಕ್ತಗಾಯವಾಗಿರುತ್ತದೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ  

ಇತರೆ: ಇಲ್ಲ    

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ    

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ನೇ ಜುಲೈ ೨೦೦೮

July 28, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ   

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೭-೨೦೦೮ ರಂದು ೦೫೪೫ ರಲ್ಲಿ ಈಚರ್‍ ವಾಹನ ಸಂಖ್ಯೆ ಕೆಎ–೪೦-ಎ-೧೩೫೯ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಎದರುಗಡೆಯಿಂದ ಕೋಲಾರ-ಬಂಗಾರಪೇಟೆ ಮುಖ್ಯ ರಸ್ತೆ ಗೋಲ್ಡ್ ಪೀಲ್ಡ್ ಶಿಕ್ಷಣ ಕಾಲೇಜಿನ ಮುಂಭಾಗ ಬರುತ್ತಿದ್ದ ಮೋಟಾರು ಸೈಕಲ್ ಸವಾರ ಶ್ರೀ ಎನ್,ರಾಮಚಂದ್ರ (೨೫), ಪಿಚ್ಚಹಳ್ಳಿ ಗ್ರಾಮ ರವರ ವಾಹನ ಸಂಖ್ಯೆ ಕೆಎ-೦೨-ಇಎಲ್-೬೯೧೦ಗೆ ಡಿಕ್ಕಿ ಹೊಡೆದ ಪ್ರಯುಕ್ತ ರಾಮಚಂದ್ರ ರವರಿಗೆ ತಲೆಗೆ ತೀವ್ರ ಸ್ವರೂಪತ ರಕ್ತಗಾಯಗಳಾಗಿದ್ದು, ಸದರಿ ರವರನ್ನು ಕೋಲಾರ ಆಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿರುತ್ತಾರೆ.   

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ  

ಇತರೆ: ಇಲ್ಲ    

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೦೭-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ರಾಬರ್ಟ್‌‌ಸನ್‌ಪೇಟೆ, ೩ನೇ ಕ್ರಾಸ್ ವಾಸಿ ಶ್ರೀಮತಿ ಅರುಧಂತಿ (೫೦) ಎಂಬುವರು ತನ್ನ ಮನೆಯಲ್ಲಿ ಸೀಮೇ ಎಣ್ಣೆ ದೀಪ ಉರಿಸಲು ಹೋಗಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಾಗಿ ಸುಟ್ಟಗಾಯಗಳಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ ೧೯-೦೭-೨೦೦೮ ರಂದು ೧೪೩೦ ಗಂಟೆಗೆ ಮೃತ ಪಟ್ಟಿರುತ್ತಾರೆ.  

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನಸ ಅಪರಾಧಗಳ ಪಕ್ಷಿನೋಟ ೨೭ನೇ ಜುಲೈ ೨೦೦೮

July 27, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೭-೨೦೦೮ ರಂದು ೦೧೩೦ ರಿಂದ ೦೬೦೦ ಗಂಟೆ ಸಮಯದಲ್ಲಿ ಯಾರೋ ಕಳ್ಳರು ಬಂಗಾರಪೇಟೆಯ ಬೂದಿಕೋಟೆ ರಸ್ತೆಯ ಮನೆ ಸಂ. ೩೨೧೭ ರ ವಾಸಿ ಶ್ರೀ ಸೈಯದ್ ಖತೀಬ್‌ಯಲ್ಲಾ ಎಂಬುವರ ಮನೆಯ ಕಾಂಪೌಂಡ್ ಮೇಲ್ಬಾಗ ಹತ್ತಿ ಮನೆಯ ಮೇಲೆ ಕಿಟಿಕಿಯಲ್ಲಿ ಒಂದು ನೀರಿನ ಪೈಪ್‌ಗೆ ಕಂಬಿಯನ್ನು ಕಟ್ಟಿ ಮನೆಯ ಶೋಕೇಷ್ ಮೇಲೆ ಇಟ್ಟಿದ್ದ ಒಂದು ಮಾಂಗಲ್ಯ ಸರ, ಒಂದು ಜೊತೆ ಚಿನ್ನದ ಕೈಬಳೆಗಳು ಹಾಗೂ ನಗದು ಹಣ ೯೫೦೦/- ರೂಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ   

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ  

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ  

ಇತರೆ: ೦೨

  •   ಚಾಂಪಿಯನ್‌ರೀಪ್ಸ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೭-೨೦೦೮ ರಂದು ೧೧೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಚಾಂಪಿಯನ್‌ರೀಫ್ಸ್, ಡಬ್ಲ್ಯೂಟಿ ಬ್ಲಾಕ್, ಮನೆ ಸಂ. ೩೫೫ ಶ್ರೀ ಡ್ಯಾನಿಯಲ್ ಬಿನ್ ಸೆಲ್ವರಾಜ್ ಎಂಬುವರು ತನ್ನ ತಾಯಿಯವರ ವಾರ್ಷಿಕ ಪುಣ್ಯತಿಥಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಹ್ವಾನ ಪತ್ರಿಕೆಯಲ್ಲಿ ಕೆ.ಜಿ.ಎಫ್ ಶಾಸಕರಾದ ಶ್ರೀ ವೈ.ಸಂಪಂಗಿ ರವರನ್ನು ಆಹ್ವಾನಿಸಿದ್ದು, ತನ್ನ ಲೈನಿನ ವಾಸಿ ನಗರಸಭೆ ಸದಸ್ಯರಾದ ಅಶೋಕ್ ಎಂಬಾತನು ಮನೆ ಬಳಿ ಇರುವ ರೀಡಿಂಗ್ ರೂಮಿನ ಬಳಿ ಕರೆದು ಇದು ನಮ್ಮ ಆರ್‍.ಪಿ.ಐ ಪಕ್ಷದ ಏರಿಯಾ, ಈ ಏರಿಯಾದೊಳಗೆ ಬಿ.ಜೆ.ಪಿ ಪಕ್ಷದವರನ್ನು ಕರೆಸಿದ್ದಿಯಾ ಎಂದು ಕೆಟ್ಟ ಮಾತುಗಳಿಂದ ಬೈದು ಕೈಯಿಂದ ತುಟಿಗಳ ಮೇಲೆ ಗುದ್ದಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
  • ಚಾಂಪಿಯನ್‌ರೀಪ್ಸ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೭-೨೦೦೮ ರಂದು ೧೨೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್., ಚಾಂಪಿಯನ್‌ರೀಫ್ಸ್ ಇ.ಟಿ ಬ್ಲಾಕ್ ವಾಸಿ ಶ್ರೀ ಕುಮಾರ್‍ @ ಜಯಕುಮಾರ್‍ ಎಂಬುವರು ತಮ್ಮ ಮನೆಯ ಬಳಿ ನೀರು ಹಿಡಿಯುವ ವಿವಾರದಲ್ಲಿ ಜಗಳ ಬಿಡಿಸಲು ಹೋದಾಗ ಕಿರುಬಾಕರನ್‌, ರಾಮು ಮತ್ತು ಪ್ರವೀಣ್ ರವರು ತನ್ನ ತಮ್ಮನ ಮನೆಯ ಬಳಿಗೆ ಬಂದು ತನ್ನ ತಮ್ಮನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ.   

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ನೇ ಜುಲೈ ೨೦೦೮

July 26, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೭-೨೦೦೮ ಕ್ಕೆ ಸುಮಾರು ೮ ವರ್ಷಗಳ ಹಿಂದೆ ಮುಳಬಾಗಲು ತಾಲೂಕು ವಾಸಿ ಶ್ರೀಮತಿ ಚಂದ್ರಕಳಾ ಎಂಬುವರನ್ನು ಬಂಗಾರಪೇಟೆ ತಾಲೂಕು ಕೇತಗಾನಹಳ್ಳಿ ಗ್ರಾಮದ ವಾಸಿ ನಾಗರಾಜಪ್ಪ ಬಿನ್ ಚಿನ್ನಪ್ಪ ಎಂಬುವರೊಂದಿಗೆ ಮದುವೆಯಾಗಿದ್ದು, ಒಂದೆರಡು ವರ್ಷ ಹಂಡ ಹೆಂಡತಿ ಅನ್ಯೋನ್ಯವಾಗಿದ್ದು ಅವರಿಗೆ ಒಂದು ಹಂಡು ಮತ್ತು ಒಂದು ಹೆಣ್ಣು ಮಕ್ಕಳಾಗಿದ್ದು, ನಂತರದ ದಿನಗಳಲ್ಲಿ ಸದರಿ ಚಂದ್ರಕಳಾರವರಿಗೆ ಆಕೆಯ ಗಂಡ ಮತ್ತು ಗಂಡನ ಅಣ್ಣ ವೆಂಕಟೇಶಪ್ಪ ರವರು ಆಗಾಗ ಕಟ್ಟಮಾತುಗಳಿಂದ ಬೈದು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಾ ತವರಿಗೆ ಹೋಗಿ ಹಣ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದರಿಂದ ಚಂದ್ರಕಳಾ ರವರು ಮಾನಸಿಕ ಹಿಂಸೆ ತಾಳಲಾರದೆ ದಿನಾಂಕ ೨೫-೦೭-೨೦೦೮ ರಂದು ೧೨೩೦ ಗಂಟೆಯಲ್ಲಿ ನೇಣುಹಾಕಿಕೊಂಡು ಮೃತ ಮಟ್ಟಿರುತ್ತಾಲೆ. 

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ  

-ಸಾಧಾರಣ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೭-೨೦೦೮ ರಂದು ೧೪೩೦ ಗಂಟೆ ಸಮಯದಲ್ಲಿ  ಬೆಂಗಳೂರಿನ ಹೊಸ ತಿಪ್ಪಸಂದ್ರ ವಾಸಿ ಶ್ರೀ ವಿಕ್ರಮ್ ಬಿನ್ ಶ್ರೀನಿವಾಸ್ ಎಂಬುವರು ತನ್ನ ಕಾರ್‍ ಸಂಖ್ಯೆ ಕೆಎ-೦೭-ಎಂ-೧೬೯೯ ಅನ್ನು ರಾಬರ್ಟ್‌‌ಸನ್‌ಪೇಟೆಯ ಬಿ.ಎಂ. ರಸ್ತೆಯಲ್ಲಿರುವ ಕಾರ್ಪೋರೇಷನ್ ಬ್ಯಾಂಕಿನ ಸಮೀಪ ರಸ್ತೆಯ ಎಡಬದಿಯಲ್ಲಿ ನಿಲ್ಲಿಸುತ್ತಿದ್ದಾಗ ಆಟೋ ಸಂಖ್ಯೆ ಕೆಎ-೦೮-೧೫೯೯ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಹಿಸಿಕೊಂಡು ಬಂದು ಕಾರಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿರುತ್ತಾರೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ  

ಇತರೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಜೂಜಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೭-೨೦೦೮ ರಂದು ಶ್ರೀ ವೆಂಕಟೇಶ್.ಆರ್‍, ಪಿ.ಎಸ್.ಐ, ಬೇತಮಂಗಲ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಗಳೊಂದಿಗೆ ಬಂಗಾರಪೇಟೆ ತಾಲೂಕು ವೆಂಗಸಂದ್ರ ಗ್ರಾಮದ ಬಜಂತ್ರಿ ಪಿಳ್ಳಣ್ಣ ರವರ ಜಮೀನಿನಲ್ಲಿರುವ ಹುಣಸೇ ಮರದ ಕೆಳಗೆ ಕೃಷ್ಣ ಬಿನ್ ಚಿಕ್ಕವೆಂಕಟಪ್ಪ, ಬೇತಮಂಗಲ, ವೆಂಕಟೇಶ್ ಬಿನ್ ಪಿಳ್ಳಪ್ಪ, ಬಡಮಾಕನಹಳ್ಳಿ ಮತ್ತು ನಾರಾಯಣಸ್ವಾಮಿ ಬಿನ್ ಗೋವಿಂದಪ್ಪ, ಬಲಮಾಕನಹಳ್ಳಿ ಗ್ರಾಮದವರುಗಳು ಯಾವಯದೇ ರಹದಾರಿ ಇಲ್ಲದೆ ಜೂಜಾಟ ಆಡುತ್ತಿದ್ದವರನ್ನು ಮತ್ತು ಜೂಜಾತಕ್ಕೆ ಬಳಿಸಿದ ೫೨ ಕಾರ್ಡ್ಸ್‌ ಮತ್ತು ಜೂಜಾಟಕ್ಕೆ ಪಣವಾಗಿಟ್ಟಿದ್ದ ರೂ ೧೨೭೦/- ಗಳನ್ನು ವಷಪಡಿಸಿಕೊಂಡಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಜೂನ್ ೨೦೦೮

July 25, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೭-೨೦೦೮ ರಂದು ಮದ್ಯಾನ ಸತ್ಯಶೀಲನ್ ಮಾಜಿ ಎಕ್ಸ್‌ಎಲ್ ಏಜೆಂನ್ಸಿಯ ಸೆಕ್ಯೂರಿಟಿ ಸೂಪರ್‌ವೈಸರ್‍ ರವರು ನಕಲಿ ಬೀಗದಕೈಯಿಂದ ಬಿ.ಜಿ.ಎಂ.ಎಲ್ ಸಂಸ್ಥೆಗೆ ಸೇರಿದ ಸೆಕ್ಯೂರಿಟಿ ಕಛೇರಿಯ ಬೀಗವನ್ನು ತೆಗೆದು ಒಳಗೆ ರಾಷ್ರೀಯ ನಾಕರ ಭಾವ ಚಿತ್ರಗಳನ್ನು, ಒಂದು ಟೈಪ್‌ರೈಟರ್‍ ಮತ್ತು ಪೀಠೋಪಕರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

  •    ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೭-೨೦೦೮ ರಂದು ೧೨೪೫ ಗಂಟೆ ಸಮಯದಲ್ಲಿ ಆಟೋರಿಕ್ಷಾ ಸಂಖ್ಯೆ ಕೆಎ-೦೩-೪೬೫ರ ಚಾಲಕನು ಆಟೋದಲ್ಲಿ ಮತ್ತೊಬ್ಬ ಆಸಾಮಿಯನ್ನು ಕುಳ್ಳರಿಸಿಕೊಂಡು ಕೆ.ಜಿ.ಎಫ್. ಕಡೆಯಿಂದ ದಾಸರಹೊಸಹಳ್ಳಿ ಕಡೆ ಹೋಗಲು ಹೆಚ್.ಜೆ.ಆರ್‍ ಕಲ್ಯಾಣ ಮಂಟಪ ಮುಂಭಾಗ ಹೋಗುತ್ತಿರುವಾಗ ಎದರುಗಡೆಯಿಂದ ಅಂದರೆ ಬಂಗಾರಪೇಟೆ ಕಡೆಯಿಂದ ಕೆ.ಎಸ್.ಆರ್‍.ಟಿ.ಸಿ ಬಸ್ಸು ಸಂಖ್ಯೆ ಕೆಎ-೦೭-ಎಫ್-೧೧೦೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಎದರುಗಡೆಯಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದ ಪ್ರಯುಕ್ತ ಆಟೋದಲ್ಲಿ ಮುರಳಿ ಮತ್ತು ಬಾಲುರವರಿಗೆ ರಕ್ತಗಾಯಗಳಾಗಿದ್ದು, ಸದರಿ ಗಾಯಾಳುಗಳನ್ನು ರಾಬರ್ಟ್‌‌ಸನ್‌ಪೇಟೆ ಜನರಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸುತ್ತಿದ್ದಾಗ ಮಾರ್ಗ ಮದ್ಯದಲ್ಲಿ ಮುರಳಿ ಎಂಬುವರು ಮೃತ್ ಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೭-೨೦೦೮ ರಂದು ೧೨೩೦ ಗಂಟೆ ಸಮಯದಲ್ಲಿ ಮಸ್ಕಂ ಬಳಿ ಮಸ್ಕಂ ವಾಸಿ ದೇವರಾಜ್ ಬಿನ್ ಲಕ್ಷ್ಮಯ್ಯ ಮತ್ತು ಹುಕ್ಕನಹಳ್ಳಿ ಗ್ರಾಮದ ವಾಸಿ ಶ್ರೀನಿವಾಸ್ ರವರಿಗೆ ಜಮೀನು ತಕರಾರು ಇದ್ದು, ಆಸ್ಥಳದಲ್ಲಿ ೧ನೇ ಪಾರ್ಟಿ ಮತ್ತು ೨ನೇ ಪಾರ್ಟಿ ರವರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಒಬ್ಬರಿಗೊಬ್ಬರು ಗಲ್ಲಾಪಟ್ಟಿ ಹಿಡಿದು ಎಳೆದಾಡಿ ಗುದ್ದಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟುಮಾಡಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಜುಲೈ ೨೦೦೮

July 23, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ 

-ಸಾಧಾರಣ: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೭-೨೦೦೮ ರಂದು ೧೫೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು, ಶೆಟ್ಟಿಕೊತ್ತನೂರು ಗ್ರಾಮದ ವಾಸಿ ಶ್ರೀ ಬ್ಯೆಚ್ಚೇಗೌಡ ಬಿನ್ ಲೇಟ್ ಮುನಿಶಾಮಪ್ಪ ಎಂಬುವರು ತನ್ನ ಚಿಕ್ಕಪ್ಪನ ಮಗನಾದ ನಾಗರಾಜ್ ಎಂಬುವರ ಟಿವಿಎಸ್ ಸೂಪರ್‍ ಎಕ್ಸ್‌ಎಲ್ ವಾಹನ ಸಂಖ್ಯೆ ಕೆಎ-೦೩-ಇಡಿ-೪೦೩೪ ರಲ್ಲಿ ಹಿಂದುಗಡೆ ಕುಳಿತುಕೊಂಡು ಕೆ.ಜಿ.ಎಫ್.-ಬಂಗಾರಪೇಟೆ ಮುಖ್ಯ ರಸ್ತೆಯಲ್ಲಿರುವ ಲ್ಯಾಂಡ್‌ಮಾರ್ಕ್‌ ಹೋಟೆಲ್ ಮುಂಭಾಗ ಬಂಗಾರಪೇಟೆ ಕಡೆ ಹೋಗುತ್ತಿರುವಾಗ ಹಿಂದೆಗಡೆಯಿಂದ ಬಳಿ ಬಣ್ಣದ ಮಾರುತಿ ಓಮನಿ ಕಾರು ಚಾಲಕ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಹಿಸಿಕೊಂಡು ಬಂದು ಟಿವಿಎಸ್ ಸೂಪರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ನಾಗರಾಜ್ ಕೆಳಕ್ಕೆ ಬಿದ್ದು ತಲೆಗೆ ರಕ್ತಗಾಯವಾಗಿರುತ್ತದೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೭-೨೦೦೮ ರಂದು ೧೧೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬಿಳ್ಳೇರಹಳ್ಳಿ ಗ್ರಾಮದ ವಾಸಿ ಶ್ರೀ ವೆಂಕಟರಾಮಪ್ಪ ತನ್ನ ಗ್ರಾಮದ ಚಂಗಲರಾಯಪ್ಪ ರವರ ಮನೆಯ ಮುಂದೆ ನಡೆದುಕೊಂಡು ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿಗಳಾದ ಚಿಂಗಲರಾಯಪ್ಪ, ಮಂಜುನಾಥ, ಕಮಲಮ್ಮ ಮತ್ತು ಸುಜಾತ ಎಂಬುವರುಗಳು ಹಳೇ ವೈಷಮ್ಯದಿಂದ ವೆಂಕಟರಾಮಪ್ಪನವರೊಂದಿಗೆ ಜಗಳ ತೆಗೆದು ಒಂದು ಕಲ್ಲು ಮತ್ತು ಕುಡುಗೋಲಿನಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.  

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೭-೨೦೦೮ ರಂದು ೧೧೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್.ನ ಅಬ್ಕಾರಿ ಜಾರಿ & ಲಾಟರಿ ನಿಷೇದ ವಿಭಾಗದ ಪಿ.ಐ ಶ್ರೀ ರಮೇಶ್ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ರಾಬರ್ಟ್‌‌ಸನ್‌ಪೇಟೆಯ ಶ್ರೀರಾಮನಗರದಲ್ಲಿರುವ ದೊರೈಸ್ವಾಮಿ ಎಂಬುವರು ತನ್ನ ಮನೆಯಲ್ಲಿ ಸಾರಾಯಿಯನ್ನು ತಯಾರಿಸುತ್ತಿದ್ದವರನ್ನು ಮತ್ತು ೪ ಪ್ಲಾಸ್ಟಿಕ್ ಬಿಂದಿಗೆಯಲ್ಲಿದ್ದ ಸುಮಾರು ೮೦ ಲೀಟರ್‌ನಷ್ಟು ಕಳ್ಳಭಟ್ಟಿ ಸಾರಾಯಿಯನ್ನು ವಶ ಪಡಿಸಿಕೊಂಡಿರುತ್ತಾರೆ.    

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬೆಂಗಳೂರು, ವಿಜಯನಗರ, ಗೋವಿಂದರಾಜ ನಗರದ ಮನೆ ಸಂಖ್ಯೆ ೧೧೬ ರ ವಾಸಿ ರಮೇಶ್ (೩೨) ಎಂಬುವರಿಗೆ ಪೈಲ್ಸ್ ಕಾಯಿಲೆ ಮತ್ತು ಹೊಟ್ಟೆ ನೋವಿನಿಂದ ನರಳುತ್ತಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ ೨೩-೦೭-೨೦೦೮ ರಂದು ಬೆಳಿಗ್ಗೆ ಯಾವುದೋ ವಿಷ ಸೇವನೆ ಮಾಡಿ ಆಂಡ್ರಸನ್‌ಪೇಟೆಯ ಶ್ರೀರಾಮ ದೇವಾಲಯದ ಬಳಿ (ರಮೇಶ್ ರವರ ಪತ್ನಿಯ ಮನೆ) ಇರುವ ಮಾವನ ಮನೆಯ ಮುಂದೆ ಬಿದ್ದಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮೃತ ಪಟ್ಟಿರುತ್ತಾನೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೨ನೇ ಜುಲೈ ೨೦೦೮

July 22, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲಾ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ 

-ಸಾಧಾರಣ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ  ಒಂದು ಪ್ರಕರಣ ದಾಖಲಾಗಿರುತ್ತದೆ ದಿನಾಂಕ ೨೧.೦೭.೨೦೦೮ ರಂದು ಸಂಜೆ ೭ ಗಂಟೆಯ ಸಮಯದಲ್ಲಿ ಬ್ಯಾಟರಾಯನಹಳ್ಳಿ ಗ್ರಾಮದ ವಾಸಿ ನಾರಾಯಣಪ್ಪ ತನ್ನ ಟಿವಿಎಸ್‌ಸಂಖ್ಯೆ ಸಿಎನ್‌ಕೆ ೪೦೧೩ ರ ವಾಹನದಲ್ಲಿ ಆದೇ ಗ್ರಾಮದ ಶಿವಪ್ಪನನ್ನು ಕುಳ್ಳರಿಸಿಕೊಂಡು ಬಲ್ಲ ಗ್ರಾಮದಿಂದ ಸ್ವಂತ ಕೆಲಸ ಮುಗಿಸಿಕೊಂಡು ಊರಿಗೆ ವಾಪಸ್ಸು ಬರಲು ಬೇತಮಂಗಲದ ಪಾಲರ್‍ ಸೇತುವೆ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಬೇತಮಂಗಲ ಕಡೆಯಿಂದ ಆಟೋ ಸಂಖ್ಯ ಸಿಎಡಬ್ಲೂ ೧೯೧೫ ರ ಚಾಲಕ ತನ್ನ ವಾಹವನ್ನು ಅತಿ ವೇಗ ಮತ್ತು ಅಜಾಗರುಕತೆಯಿಂದ ಬಂದು ನಾರಾಣಪ್ಪನವರ ವಾಹನಕ್ಕೆ ಡಿಕ್ಕಿ ಹಡೆದು ಇಬ್ಬರು ಕೆಳಕ್ಕೆ ಬಿದ್ದು ರಕ್ತ ಗಾಯಗಳಾಗಿರುತ್ತದೆ.  

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೭-೨೦೦೮ ರಂದು ಸಂಜೆ ಯಾರೋ ಒಬ್ಬ ಹೆಂಗಸು, ವಯಸ್ಸು ಸುಮಾರು ೭೦ ವರ್ಷವುಳ್ಳವಳು ಕಮ್ಮಸಂದ್ರ ಗ್ರಾಮದ ಸ್ಮಶಾನ ಬಳಿಯಿರುವ ಗೋಕುಂಟೆಯಲ್ಲಿ ಬಿದ್ದು ಮೃತಪಟ್ಟಿರುವುದಾಗಿ ಪ್ರಸಾದ್‌ ಎಂಬುವರು ದೂರು ನೀಡಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೧ನೇ ಜುಲೈ ೨೦೦೮

July 22, 2008

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಕಂಬಂಪಲ್ಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೯-೦೭-೨೦೦೮ ರಂದು ರಾತ್ರಿ ಸಮಯದಲ್ಲಿ ಕಂಬಂಪಲ್ಲಿ ಗ್ರಾಮದ ವಾಸಿ ನಾರಾಯಣಪ್ಪ ರವರ ಒಂಟಿ ಮನೆಯಲ್ಲಿ ಯಾರೋ ಸುಮಾರು ೨೫-೩೦ ವಯಸ್ಸಿನ ಹೆಂಗಸನ್ನು ಮತ್ತು ಸುಮಾರು - ವರ್ಷದ ಗಂಡು ಮಗುವನ್ನು ಯಾರೋ ದುಷ್ಕರ್ಮಿಗಳು ಬೆಂಕಿಯಿಂದ ಸುಟ್ಟು ಕೊಲೆ ಮಾಡಿ ಸಾಕ್ಷಿದಾರಗಳನ್ನು ನಾಶಪಡಿಸಿ ಹೊರಟು ಹೋಗಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೭-೨೦೦೮ ರಂದು ೧೮೩೦ ಗಂಟೆ ಸಮಯದಲ್ಲಿ ರಾಬರ್ಟ್‌‌ಸನ್‌ಪೇಟೆಯ ಗಣೇಶ್‌ಪುರಂ, ಮನೆ ಸಂಖ್ಯೆ ೧೫೬ ವಾಸಿ ಶ್ರೀ ಶಿವಲಿಂಗಾಚಾರಿ ಮತ್ತು ಸ್ನೇಹಿತ ಕರ್ಣ ಎಂಬುವರು ೬ನೇ ಕ್ರಾಸ್, ಗೀತಾ ರಸ್ತೆಯಲ್ಲಿ ಹೋಗುತ್ತಿರುವಾಗ ೬ನೇ ಕ್ರಾಸ್ ವಾಸಿಗಳಾದ ಅಪ್ಪೇನ್ ಮತ್ತು ಕುಪೇಂದ್ರ ರವರುಗಳು ಕರ್ಣ ರವರ ಬಳಿ ಕುಡಿಯಲು ಹಣ ಕೇಳಿದಾಗ ಕರ್ಣ ಹಣ ನೀಡಲು ನಿರಾಕರಿಸಿದಾಗ ಕರ್ಣನಿಗೆ ಕಾಲಿನಿಂದ ಹೊಟ್ಟೆಯ ಮೇಲೆ ಮತ್ತು ಶಿವಲಿಂಗಾಚಾರಿ ರವರಿಗೆ ಇಟ್ಟಿಗೆ ಕಲ್ಲಿನಿಂದ ತಲೆಯ ಮೇಲೆ ಹೊಡೆದು ರಕ್ತಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೨

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೃತ್ಯವು ಬಂಗಾರಪೇಟೆ ತಾಲೂಕು, ಕೊತ್ತೂರು ಗ್ರಾಮದ ಸರ್ವೆ ನಂ. ೨೯ರ ಜಮೀನಿನಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೧-೦೭-೨೦೦೮ ರಂದು ಬೆಳಿಗ್ಗೆ ೦೯೦೦ ಗಂಟೆ ಸಮಯದಲ್ಲಿ ಬೇತಮಂಗಲ ವಾಸಿ ಶ್ರೀ ಇನಾಯಿತುಲ್ಲಾ ರವರ ಕೊತ್ತೂರು ಗ್ರಾಮದ ಸರ್ವೆ ನಂ. ೨೯ರ ಜಮೀನಿನಲ್ಲಿ ಯಾರೋ ಒಬ್ಬ ವ್ಯಕ್ತ ಮಾವಿನ ಮರಕ್ಕೆ ನೇಣುಹಾಕಿಕೊಂಡು ಮೃತ ಪಟ್ಟಿರುತ್ತಾನೆ. ಮೃತಪಟ್ಟಿರುವ ವ್ಯಕ್ತಿ ಕಂಬಂಪಲ್ಲಿ ಗ್ರಾಮದ ವಾಸಿಯಾದ ನಾರಾಯಣಪ್ಪನಾಗುದ್ದು, ಸದರಿ ನಾರಾಯಣಪ್ಪ ರವರು ವಾಸವಿರುವ ಮನೆಯಲ್ಲಿ ದಿನಾಂಕ ೨೦-೦೭-೨೦೦೮ ರಂದು ಬೆಳಗಿನ ಜಾವ ಯಾರೋ ವ್ಯಕ್ತಿಗಳು ಒಂದು ಹೆಂಗಸಿಗೆ ಮತ್ತು ಗಂಡು ಮಗುವಿಗೆ ಬೆಂಕಿ ಹಚ್ಚಿ ಸಾಯಿಸಿರುತ್ತಾರೆ, ವಿಷಯವಾಗಿ ನಾರಾಯಣಪ್ಪ ನೇಣುಹಾಕಿಕೊಂಡು ಮೃತ ಪಟ್ಟಿರಬಹುದು.
  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೭-೨೦೦೮ ರಂದು ಬೆಳಿಗ್ಗೆ ೦೮೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ಏಕಾಬರಂ ರಸ್ತೆ ವಾಸಿ ಯಶವಂತ್ (೧೮) ಬಿನ್ ಸುಬ್ರಮಣಿಶೆಟ್ಟಿ ಎಂಬುವನು ಮನೆಯಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕಳುಹಿಸದೇ ಇದ್ದು, ಇದಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಇಲಿ ಔಷದಿಯನ್ನು ಕುಡಿದಿದ್ದವನನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಪಲಕಾರಿಯಾಗದೆ ೧೧೪೫ ಗಂಟೆಯಲ್ಲಿ ಮೃತ ಪಟ್ಟಿರುತ್ತಾನೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.