ದಿನದ ಅಪರಾಧಗಳ ಪಕ್ಷಿನೋಟ ೨೧ನೇ ಜುಲೈ ೨೦೦೮

 ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಕಂಬಂಪಲ್ಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೯-೦೭-೨೦೦೮ ರಂದು ರಾತ್ರಿ ಸಮಯದಲ್ಲಿ ಕಂಬಂಪಲ್ಲಿ ಗ್ರಾಮದ ವಾಸಿ ನಾರಾಯಣಪ್ಪ ರವರ ಒಂಟಿ ಮನೆಯಲ್ಲಿ ಯಾರೋ ಸುಮಾರು ೨೫-೩೦ ವಯಸ್ಸಿನ ಹೆಂಗಸನ್ನು ಮತ್ತು ಸುಮಾರು - ವರ್ಷದ ಗಂಡು ಮಗುವನ್ನು ಯಾರೋ ದುಷ್ಕರ್ಮಿಗಳು ಬೆಂಕಿಯಿಂದ ಸುಟ್ಟು ಕೊಲೆ ಮಾಡಿ ಸಾಕ್ಷಿದಾರಗಳನ್ನು ನಾಶಪಡಿಸಿ ಹೊರಟು ಹೋಗಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

-ಸಾಧಾರಣ: ಇಲ್ಲ 

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೭-೨೦೦೮ ರಂದು ೧೮೩೦ ಗಂಟೆ ಸಮಯದಲ್ಲಿ ರಾಬರ್ಟ್‌‌ಸನ್‌ಪೇಟೆಯ ಗಣೇಶ್‌ಪುರಂ, ಮನೆ ಸಂಖ್ಯೆ ೧೫೬ ವಾಸಿ ಶ್ರೀ ಶಿವಲಿಂಗಾಚಾರಿ ಮತ್ತು ಸ್ನೇಹಿತ ಕರ್ಣ ಎಂಬುವರು ೬ನೇ ಕ್ರಾಸ್, ಗೀತಾ ರಸ್ತೆಯಲ್ಲಿ ಹೋಗುತ್ತಿರುವಾಗ ೬ನೇ ಕ್ರಾಸ್ ವಾಸಿಗಳಾದ ಅಪ್ಪೇನ್ ಮತ್ತು ಕುಪೇಂದ್ರ ರವರುಗಳು ಕರ್ಣ ರವರ ಬಳಿ ಕುಡಿಯಲು ಹಣ ಕೇಳಿದಾಗ ಕರ್ಣ ಹಣ ನೀಡಲು ನಿರಾಕರಿಸಿದಾಗ ಕರ್ಣನಿಗೆ ಕಾಲಿನಿಂದ ಹೊಟ್ಟೆಯ ಮೇಲೆ ಮತ್ತು ಶಿವಲಿಂಗಾಚಾರಿ ರವರಿಗೆ ಇಟ್ಟಿಗೆ ಕಲ್ಲಿನಿಂದ ತಲೆಯ ಮೇಲೆ ಹೊಡೆದು ರಕ್ತಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೨

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೃತ್ಯವು ಬಂಗಾರಪೇಟೆ ತಾಲೂಕು, ಕೊತ್ತೂರು ಗ್ರಾಮದ ಸರ್ವೆ ನಂ. ೨೯ರ ಜಮೀನಿನಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೧-೦೭-೨೦೦೮ ರಂದು ಬೆಳಿಗ್ಗೆ ೦೯೦೦ ಗಂಟೆ ಸಮಯದಲ್ಲಿ ಬೇತಮಂಗಲ ವಾಸಿ ಶ್ರೀ ಇನಾಯಿತುಲ್ಲಾ ರವರ ಕೊತ್ತೂರು ಗ್ರಾಮದ ಸರ್ವೆ ನಂ. ೨೯ರ ಜಮೀನಿನಲ್ಲಿ ಯಾರೋ ಒಬ್ಬ ವ್ಯಕ್ತ ಮಾವಿನ ಮರಕ್ಕೆ ನೇಣುಹಾಕಿಕೊಂಡು ಮೃತ ಪಟ್ಟಿರುತ್ತಾನೆ. ಮೃತಪಟ್ಟಿರುವ ವ್ಯಕ್ತಿ ಕಂಬಂಪಲ್ಲಿ ಗ್ರಾಮದ ವಾಸಿಯಾದ ನಾರಾಯಣಪ್ಪನಾಗುದ್ದು, ಸದರಿ ನಾರಾಯಣಪ್ಪ ರವರು ವಾಸವಿರುವ ಮನೆಯಲ್ಲಿ ದಿನಾಂಕ ೨೦-೦೭-೨೦೦೮ ರಂದು ಬೆಳಗಿನ ಜಾವ ಯಾರೋ ವ್ಯಕ್ತಿಗಳು ಒಂದು ಹೆಂಗಸಿಗೆ ಮತ್ತು ಗಂಡು ಮಗುವಿಗೆ ಬೆಂಕಿ ಹಚ್ಚಿ ಸಾಯಿಸಿರುತ್ತಾರೆ, ವಿಷಯವಾಗಿ ನಾರಾಯಣಪ್ಪ ನೇಣುಹಾಕಿಕೊಂಡು ಮೃತ ಪಟ್ಟಿರಬಹುದು.
  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೭-೨೦೦೮ ರಂದು ಬೆಳಿಗ್ಗೆ ೦೮೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ಏಕಾಬರಂ ರಸ್ತೆ ವಾಸಿ ಯಶವಂತ್ (೧೮) ಬಿನ್ ಸುಬ್ರಮಣಿಶೆಟ್ಟಿ ಎಂಬುವನು ಮನೆಯಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕಳುಹಿಸದೇ ಇದ್ದು, ಇದಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಇಲಿ ಔಷದಿಯನ್ನು ಕುಡಿದಿದ್ದವನನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಪಲಕಾರಿಯಾಗದೆ ೧೧೪೫ ಗಂಟೆಯಲ್ಲಿ ಮೃತ ಪಟ್ಟಿರುತ್ತಾನೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply