ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲಾ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೭-೨೦೦೮ ರಂದು ೦೫೪೫ ರಲ್ಲಿ ಈಚರ್ ವಾಹನ ಸಂಖ್ಯೆ ಕೆಎ–೪೦-ಎ-೧೩೫೯ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಎದರುಗಡೆಯಿಂದ ಕೋಲಾರ-ಬಂಗಾರಪೇಟೆ ಮುಖ್ಯ ರಸ್ತೆ ಗೋಲ್ಡ್ ಪೀಲ್ಡ್ ಶಿಕ್ಷಣ ಕಾಲೇಜಿನ ಮುಂಭಾಗ ಬರುತ್ತಿದ್ದ ಮೋಟಾರು ಸೈಕಲ್ ಸವಾರ ಶ್ರೀ ಎನ್,ರಾಮಚಂದ್ರ (೨೫), ಪಿಚ್ಚಹಳ್ಳಿ ಗ್ರಾಮ ರವರ ವಾಹನ ಸಂಖ್ಯೆ ಕೆಎ-೦೨-ಇಎಲ್-೬೯೧೦ಗೆ ಡಿಕ್ಕಿ ಹೊಡೆದ ಪ್ರಯುಕ್ತ ರಾಮಚಂದ್ರ ರವರಿಗೆ ತಲೆಗೆ ತೀವ್ರ ಸ್ವರೂಪತ ರಕ್ತಗಾಯಗಳಾಗಿದ್ದು, ಸದರಿ ರವರನ್ನು ಕೋಲಾರ ಆಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿರುತ್ತಾರೆ.
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೦೭-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ರಾಬರ್ಟ್ಸನ್ಪೇಟೆ, ೩ನೇ ಕ್ರಾಸ್ ವಾಸಿ ಶ್ರೀಮತಿ ಅರುಧಂತಿ (೫೦) ಎಂಬುವರು ತನ್ನ ಮನೆಯಲ್ಲಿ ಸೀಮೇ ಎಣ್ಣೆ ದೀಪ ಉರಿಸಲು ಹೋಗಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಾಗಿ ಸುಟ್ಟಗಾಯಗಳಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ ೧೯-೦೭-೨೦೦೮ ರಂದು ೧೪೩೦ ಗಂಟೆಗೆ ಮೃತ ಪಟ್ಟಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


