ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೮-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಕೆಸಿರೆಡ್ಡಿಗಾನಹಳ್ಳಿಯಲ್ಲಿ ಸಂಭಂವಿಸಿರುತ್ತದೆ. ದಿನಾಂಕ: ೧೮.೦೮.೨೦೦೮ ರಂದು ರಾತ್ರಿ ೧.೦೦ ಗಂಟೆ ಸಮಯದಲ್ಲಿ ಕೆಸಿರೆಡ್ಡಿಗಾನಹಳ್ಳಿ ವಾಸಿಗಳಾದ ಕೃಷ್ಣಪ್ಪ ಮತ್ತು ಅಂಗಡಿ ರಾಜಪ್ಪನಿಗೆ ಗಲಾಟೆಯಾಗಿದ್ದು, ಈ ವಿಷಯವನ್ನು ಶ್ರೀ. ಸುಬ್ರಮಣಿ ಬಿನ್ ಸೋಮಸುಂದರ್ , ಕೆ.ಜಿ. ಹಳ್ಳಿ, ಬೆಂಗಳೂರು ರವರು ವಿಚಾರ ಮಾಡುತ್ತಿದ್ದಾಗ, ಅದೇ ಗ್ರಾಮದ ವಾಸಿಗಳಾದ ಶ್ರೀರಾಮಪ್ಪ, ರಮೇಶ ಅಮರನಾರಾಯಣ ಮತ್ತು ತಿಪ್ಪಯ್ಯ ರವರುಗಳು ನೀನು ಕೃಷ್ಣಪ್ಪನಿಗೆ ಸಹಾಯ ಮಾಡಲು ಬೆಂಗಳೂರಿನಿಂದ ಬಂದಿದ್ದಿಯ ಎಂತ ಜಗಳ ಕಾದು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ. ಇತ್ಯಾದಿ.
ಇತರೆ: ೦೧
-
ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಯಲ್ಲಿ ನ್ಯಾಯಾಲಯ ಕಲಾಪಗಳಿಗೆ ಅಡಚಣೆ ಉಂಟು ಮಾಡಿದಂತೆ ಒಂದು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೨.೦೮.೨೦೦೮ ರಂದು ಬೆಳಿಗ್ಗೆ ೧೧.೪೫ ಸಮಯದಲ್ಲಿ ಕೆ.ಜಿ.ಎಫ್ ಅಪರ ಮತ್ತು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಸಿ.ಸಿ. ಸಂಖ್ಯೆ ೭೭೪/೨೦೦೮ರಲ್ಲಿನ ಆರೋಪಿ ಬಾಬು ಅನ್ನು ಬೆಂಗಾವಲು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಬಾಬು ತನ್ನ ಚಪ್ಪಲಿಯನ್ನು ಪ್ರಿಸೈಡಿಂಗ್ ಅಫೀಸರ್ ಕಡೆ ಎಸೆದು ನ್ಯಾಯಾಲಯದ ಕಲಾಪಗಳಿಗೆ ಅಡಚಣೆ ಉಂಟು ಮಾಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


