ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೯-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೨
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೯-೨೦೦೮ ರಂದು ೨೦೪೫ ಗಂಟೆ ಸಮಯದಲ್ಲಿ ಸತೀಶ್ @ ಕುಟ್ಟಿ ಎಂಬುವನು ತನ್ನ ಆಟೋ ಸಂಖ್ಯೆ ಕೆಎ-೦೬-ಎ-೧೪೯೧ ಅನ್ನು ಬಂಗಾರಪೇಟೆಯ ಶ್ರೀನಿವಾಸ ಹೋಟಲ್ ಮುಂಭಾಗದ ಮುಖ್ಯೆ ರಸ್ತೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಸಿ ಬಂಗಾರಪೇಟೆ ದೇಶಿಹಳ್ಳಿ ವಾಸಿ ಶ್ರೀಮತಿ ಲಕ್ಷ್ಮಿ (೩೨) ಕೋಂ ವೆಂಕಟೇಶ್ ಎಂಬುವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ಲಕ್ಷ್ಮಿಯವರ ತಲೆಗೆ ರಕ್ತಗಾಯವಾಗಿದ್ದು, ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಪಲಕಾರಿಯಾಗದೆ ದಿನಾಂಕ ೧೮-೦೯-೨೦೦೮ ರಂದು ಮೃತ ಪಟ್ಟಿರುತ್ತಾರೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೯-೨೦೦೮ ರಂದು ೦೯೫೦ ಗಂಟೆ ಸಮಯದಲ್ಲಿ ನಾರಾಯಣಸ್ವಾಮಿ ಎಂಬುವರು ಬೋಲೆರೋ ವಾಹನ ಸಂಖ್ಯೆ ಕೆಎ-೫೨-ಎಂ-೪೪೫ ವಾಹನ ಚಾಲಕನಾಗಿದ್ದು ಬಂಗಾರಪೇಟೆ-ಕೋಲಾರ ಮುಖ್ಯ ರಸ್ತೆ ಹಂಚಾಳ ಗೇಟ್ ಬಳಿ ರಸ್ತೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಹಂಚಾಳದ ಶಾಲೆಯಲ್ಲಿ ೮ನೇ ತರಗತಿ ವಿದ್ಯಾಬ್ಯಾಸ ಮಾಡುತ್ತಿರುವ ವಿಧ್ಯಾರ್ಥಿ ವಿಜಯ್ ಕುಮಾರ್ @ ಅಜಯ್ ಎಂಬುವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ರಕ್ತಗಾಯವಾಗಿದ್ದು, ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಪಲಕಾರಿಯಾಗದೆ ಮೃತ ಪಟ್ಟಿರುತ್ತಾರೆ.
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


