ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಡಕಾಯತಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬/೨೭-೦೯-೨೦೦೮ ರಂದು ೦೧೪೫ ಗಂಟೆ ಸಮಯದಲ್ಲಿ ನಾಲ್ಕು ಜನ ಅಪರಿಚಿತ ದುಷ್ಕರ್ಮಿಗಳು ಬಂಗಾರಪೇಟೆ ತಾಲೂಕು ಓಂಕಾರ ದೇವಸ್ಥಾನದ ಕಾವಲುಗಾರ ಚಿಕ್ಕಪಿಳ್ಳಪ್ಪ ಎಂಬುವರನ್ನು ಕಬ್ಬಿಣದ ರಾಡಿನಿಂದ ಕಾಲಿನ ಮೇಲೆ ಹೊಡೆದು ಗಾಯಪಡಿಸಿ ಕೈಗಳನ್ನು ಕಟ್ಟಿಹಾಕಿ ಪ್ರಧಾನ ಅರ್ಚಕರಾದ ಶ್ರೀ ರಾಘವೇಂದ್ರಭಟ್ ರವರ ಮನೆಯ ಬಾಗಿಲನ್ನು ಮುರಿದು ಮನೆಯ ಒಳಗಡೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿ ಮಲಗಿದ್ದ ಉದಯಕುಮಾರ್ಭಟ್ ರವರ ಕೆನ್ನೆಗೆ ಕೈಯಿಂದ ಹೊಡೆದು ಕಾವಲುಗಾರನನ್ನು ಮತ್ತು ಉದಯಕುಮಾರ್ ಇಬ್ಬರನ್ನು ಟಾಯ್ಲೇಟ್ ಒಳಗಡೆ ಅಕ್ರಮವಾಗಿ ಕೂಡಿಹಾಕಿ ನಂತರ ಸದರಿ ಮನೆಯ ಕೊಠಡಿಯ ಬೀಗವನ್ನು ಕಿತ್ತುಹಾಕಿ ಒಳಗೆ ಪ್ರವೇಶಿಸಿ ಬೀರುವನ್ನು ಕಿತ್ತು ಅದರಲ್ಲಿದ್ದ ನಗದು ರೂ ೫೦೦೦/-, ೩೫ ಗ್ರಾಂ ಚಿನ್ನದ ಸರ, ಮೂರು ಉಂಗುರಗಳು, ಮೂರು ಕೈ ಬಳೆಗಳನ್ನು ಮತ್ತು ಒಂದು ಕೆ.ಜಿ. ಬೆಳ್ಳಿಯ ಪೂಜೆ ಸಾಮಾನುಗಳು ಒಟ್ಟು ರೂ ೮೮೦೦೦/- ಗಳನ್ನು ಕಳವುಮಾಡಿಕೊಂಡು ಹೋಗಿರುತ್ತಾರೆ.
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡಗಿ ಕಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೯-೨೦೦೮ ರಂದು ೦೯೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್., ಉರಿಗಾಂನ ಕೋರಮಂಡಳ್, ಬಾಲ್ಘಾಟ್ ಲೈನ್, ಮನೆ ಸಂಖ್ಯೆ ೦೮ರ ವಾಸಿ ಕುಮಾರಿ ಪ್ರಿಯ (೧೮) ಬಿನ್ ಪೆರುಮಾಳ್ ಎಂಬುವಳು ಕೆ.ಜಿ.ಎಫ್.ನ ಎಫ್.ಜಿ.ಸಿ ಕಾಲೇಜಿಗೆ ಹೋಗಿದ್ದು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


