ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೭-೦೯-೨೦೦೮ ರಂದು ೧೮೩೦ ಗಂಟೆಯಲ್ಲಿ ಬಂಗಾರಪೇಟೆ ತಾಲೂಕಿನ ಕಂಗಾಂಡ್ಲಹಳ್ಳಿ ಕ್ರಾಸ್ ಬಳಿ ಶ್ರೀ ಎಂ.ಪಿ.ಮುನಿಸ್ವಾಮಿ ಶೆಟ್ಟಿ ಬಿನ್ ಪಾಪಣ್ಣ ಶೆಟ್ಟಿ, ವಾಸ: ಕೊಂಗನಪಲ್ಲಿ, ಆಂಧ್ರಪ್ರದೇಶ ರಾಜ್ಯ ರವರು ಮೋಟಾರ್ ಸೈಕಲ್ ಸಂಖ್ಯೆ: ಕೆಎ-೦೮-ಕೆ-೩೩೧೨ರಲ್ಲಿ ಕಂಗ್ಲಾಂಡ್ಲಹಳ್ಳಿ ಗ್ರಾಮದಿಂದ ಕೆ.ಜಿ.ಎಫ್. ಕಡೆಗೆ ಬರುತ್ತಿದ್ದಾಗ, ಒಂದು ಅಂಬಾಸಿಡರ್ ಕಾರ್ನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೇಲ್ಕಂಡ ಮೋಟಾರ್ ಸೈಕಲ್ಗೆ ಡಿಕ್ಕಿಪಡಿಸಿದ್ದರಿಂದ ಎಂ.ಪಿ.ಮುನಿಸ್ವಾಮಿ ರವರಿಗೆ ರಕ್ತಗಾಯಗಳಾಗಿರುತ್ತದೆ. ಕಾರಿನ ಚಾಲಕ ಕಾರ್ನ್ನು ನಿಲ್ಲಿಸದೆ ಹೊರಟು ಹೋಗಿದ್ದು, ಕಾರಿನ ಸಂಖ್ಯೆ ಮತ್ತು ಚಾಲಕ ಯಾರೆಂಬುದು ಗೊತ್ತಿರುವುದಿಲ್ಲ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬/೦೯/೨೦೦೮ ರಂದು ಕೋಲಾರ ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ವಾಸಿಗಳಾದ ಶ್ರೀ ನಾರಾಯಣಸ್ವಾಮಿ (೩೨) ಬಿನ್ ವೆಂಕಟಸ್ವಾಮಪ್ಪ ಮತ್ತು ಶ್ರೀನಿವಾಸ ಎಂಬುವರು ಹೀರೋ ಹೊಂಡಾ ಮೋಟಾರ್ ಸೈಕಲ್ ಸಂಖ್ಯೆ: ಕೆಎ-೦೭-ಕ್ಯೂ-೧೫೯೯ ರಲ್ಲಿ ಬರುತ್ತಿದ್ದಾಗ ಕೋಲಾರ-ಬಂಗಾರಪೇಟೆ ಮುಖ್ಯರಸ್ತೆ, ಹುದುಕುಳ ಗೇಟ್ನಲ್ಲಿ ಆಟೋ ಸಂಖ್ಯೆ: ಕೆಎ-೩೬-೪೫೨೩ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಮೋಟಾರ್ ಸೈಕಲ್ಗೆ ಡಿಕ್ಕಿಪಡಿಸಿದ್ದರಿಂದ ಶ್ರೀ ನಾರಾಯಣಸ್ವಾಮಿ ಮತ್ತು ಶ್ರೀನಿವಾಸ ರವರುಗಳಿಗೆ ರಕ್ತಗಾಯಗಳಾಗಿರುತ್ತವೆ. ಆಟೋವನ್ನು ಅದರ ಚಾಲಕ ಸ್ಥಳದಲ್ಲಿ ನಿಲ್ಲಿಸದೆ ಹೊರಟು ಹೋಗಿರುತ್ತಾನೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೨
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೯-೨೦೦೮ ರಂದು ೧೬೦೦ ಗಂಟೆಯಲ್ಲಿ ಶ್ರೀಮತಿ ಮುನಿಯಮ್ಮ (೫೫) ಕೋಂ ಮುನಿಯಪ್ಪ, ಬ್ಯಾಡಬೆಲೆ, ಬಂಗಾರಪೇಟೆ ತಾಲೂಕು ರವರು ತಮ್ಮ ಗ್ರಾಮದ ಬಳಿ ಕುರಿಗಳನ್ನು ಮೇಯಿಸಿಕೊಂಡು ಮನೆಗೆ ಬರುತ್ತಿದ್ದಾಗ, ಅದೇ ಗ್ರಾಮದ ವಾಸಿಗಳಾದ ಮುನೀಂದ್ರ ಮತ್ತು ಚಿನ್ನಮ್ಮ ಎಂಬುವರುಗಳು ತಮ್ಮ ಜಮೀನುನಲ್ಲಿ ಕುರಿಗಳನ್ನು ಏಕೆ ಮೇಯಿಸಿದ್ದು ಎಂತ ಶ್ರೀಮತಿ ಮುನಿಯಮ್ಮ ರವರೊಂದಿಗೆ ಜಗಳ ಕಾದು, ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೯-೨೦೦೮ ರಂದು ಬೆಳಿಗ್ಗೆ ೦೯೦೦ ಗಂಟೆಯಲ್ಲಿ ಶ್ರೀಮತಿ ಅಕೈಲ (೨೮) ಕೋಂ ಶರೀಪ್, ವಾಸ: ದೇಶಿಹಳ್ಳಿ, ಬಂಗಾರಪೇಟೆ ತಾಲೂಕು ರವರು ತನ್ನ ಮನೆಯಲ್ಲಿ ತನ್ನ ಗಂಡನೊಂದಿಗೆ ದೂರವಾಣಿಯಲ್ಲಿ ಜೋರಾಗಿ ಮಾತನಾಡುತ್ತಿದ್ದಾಗ ಅದೇ ಗ್ರಾಮದ ವಾಸಿಗಳಾದ ಅಶೋಕ್ ಬಿನ್ ರಾಮಕೃಷ್ಣಪ್ಪ ಮತ್ತು ರತಿದೇವಿ ಕೋಂ ಅಶೋಕ್ ಎಂಬುವರು ತಮ್ಮನ್ನೇ ಬೈಯುತ್ತಿರುವುದಾಗಿ ತಿಳಿದು ಶ್ರೀಮತಿ ಅಕೈಲ ರವರನ್ನು ಕೈ ಮತ್ತು ದೊಣ್ಣೆಯಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


