ದಿನದ ಅಪರಾಧಗಳ ಪಕ್ಷಿನೋಟ ೨೧ನೇ ಅಕ್ಟೋಬರ್‍ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೧೦-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ     

ಡಕಾಯತಿ: ೦೧

  •        ಉರಿಗಾಂ ಪೊಲೀಸ್ ಠಾಣೆಯಲ್ಲಿ ಡಕಾಯಿತಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಉರಿಗಾಂ ಬಿ.ಜಿ.ಎಂ.ಎಲ್ ಸ್ವರ್ಣ ಭವನ ಕಛೇರಿಯ ಆವರಣದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೧.೧೦.೨೦೦೮ ರಂದು ಬೆಳಗಿನ ಜಾವ ೨.೪೫ ಗಂಟೆ ಸಮಯದಲ್ಲಿ ಸುಮಾರು ೧೦ ಜನ ಡಕಾಯಿತರು ಮುಖಗಳಿಗೆ ಬಟ್ಟೆ ಕಟ್ಟಿಕೊಂಡು ಅಪಾಯಕರ ಆಯದಗಳನ್ನು ಹಿಡಿದುಕೊಂಡು ಸ್ವರ್ಣ ಭವನ ಕಾಂಪೌಂಡ್ ಒಳಗೆ ಪ್ರವೇಶ ಮಾಡಿ, ಕಛೇರಿಯ ರಕ್ಷಣ ಸಿಬ್ಬಂದಿಗಳಾದ ಶ್ರೀ. ವಿಲ್ಸ್‌ನ್‌ ಬಿನ್‌ ಡೇವೀಡ್‌(೩೬) ಮತ್ತು ದೊರೈರಾಜ್‌ ಗಳನ್ನು ಹಗ್ಗದಿಂದ ಕಟ್ಟಿಹಾಕಿ ದೊರೈರಾಜ್‌ ರವರ ಬಳಿ ಇದ್ದ ಮೊಬೈಲ್ ಮತ್ತು ಚಿನ್ನದ ಉಂಗರವನ್ನು ಕಿತ್ತುಕೊಂಡು ಹಾಗೂ ಗಂಧದ ಮರವನ್ನು ಕತ್ತರಿಸಿ ದರೋಡೆ ಮಾಡಿಕೊಂಡು ಹೋಗಿರುತ್ತಾರೆ.

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ          

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ        

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ   

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ     

ಹಲ್ಲೆ: ಇಲ್ಲ

ಇತರೆ: ಇಲ್ಲ            

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply