ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-
ಕಾಂಸಮುದ್ರಂ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೊಗ್ಗಲಹಳ್ಳಿ ಗ್ರಾಮದ ವಾಸಿ ಶ್ರೀ ಬೆಂಗಳೂರಪ್ಪ (೨೫) ಬಿನ್ ಚಿನ್ನಪ್ಪಯ್ಯ ಎಂಬುವರು ಟ್ರಾಕ್ಟರ್ ಸಂಖ್ಯೆ ಕೆಎ-೦೮-ಟಿ-೩೧೦೦, ಟ್ರಾಲಿ ಸಂಖ್ಯೆ ಎಪಿ-೦೪-ಟಿ-೪೦೩೦ ರಲ್ಲಿ ಕೃಷಿಗೆ ಗೊಬ್ಬರವನ್ನು ತುಂಬಿಸಿಕೊಂಡು ಅದರ ಮೇಲೆ ಕುಳಿತು ಬರುತ್ತಿರುವಾಗ ಟ್ರಾಕ್ಟರ್ ಚಾಲಕ ಭಕ್ತಲಾಯಾರು ನಿಂದ ಮುಸ್ಟ್ರಹಳ್ಳಿಗೆ ಹೋಗುವ ರಸ್ತೆಯಲ್ಲಿ ವಾಹನವನ್ನು ಅತಿವೇಗ ಮತ್ತು ಅಕಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಬೆಂಗಳೂರಪ್ಪ ಟ್ರಾಕ್ಟರ್ ನಿಂದ ಕೆಳಕ್ಕೆ ಬಿದ್ದು ಟ್ರಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲಿ ಮೃತ ಪಟ್ಟಿರುತ್ತಾರೆ.
-ಸಾಧಾರಣ: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೮ ರಂದು ೧೫೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದಾಸರಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಬಂಗಾರಪೇಟೆ ತಾಲೂಕು ದೊಡ್ರಹಳ್ಳಿ ಗ್ರಾಮದ ವಾಸಿ ಶ್ರೀ ನಾರಾಯಣಪ್ಪ ಬಿನ್ ಮುನಿಸ್ವಾಮಿ (೩೦) ಎಂಬುವರು ಕೆ.ಎಸ್.ಆರ್.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೭೪೪ ಬಸ್ಸಿನ ಹಿಂದೆಯ ಬಾಗಿಲಿನಿಂದ ಬಸ್ ಹತ್ತಲು ಹೋಗಿದ್ದು, ಸದರಿ ಬಸ್ಸಿನ ಚಾಲಕ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪ್ರಯುಕ್ತ ನಾರಾಯಣಪ್ಪ ಬಸ್ಸಿನಿಂದ ಕೆಳಗೆ ಬಿದ್ದು ಬಸ್ಸಿನ ಹಿಂಭಾಗ ಚಕ್ರಗಳು ನಾರಾಯಣಪ್ಪನವರ ಎರಡೂ ಕಾಲುಗಳ ಮೇಲೆ ಹತ್ತಿ ರಕ್ತಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


