ದಿನದ ಅಪರಾಧಗಳ ಪಕ್ಷಿನೋಟ ೧೧ನೇ ನವಂಬರ್‍ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೧-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೧೧-೨೦೦೮ ರಂದು ೧೪೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್., ಮಾರಿಕುಪ್ಪಂ, ಕೊಡಿಗೇನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಸುಮಿತ್ರಮ್ಮ ಕೋಂ ಬಾಬು ಎಂಬಾಕೆಯು ಯಾರಲ್ಲೋ ಅಕ್ರಮ ಸಂಬಂಧ ಹೊಂದಿರುವುದಾಗಿ ಅನುಮಾನಗೊಂಡು ಆಕೆಯ ಗಂಡ ಬಾಬು ಎಂಬುವನು ಆಕೆಯನ್ನು ಕೊಡಗೇನಹಳ್ಳಿ ಗ್ರಾಮದ ಬಳಿ ಇರುವ ನೀರು ಕಾಲುವೆಯ ದಡದ ಪೊದೆಯಲ್ಲಿ ಒಂದು ಕಲ್ಲಿನಿಂದ ತಲೆಯ ಹಿಂಬಾಗ ಜಜ್ಜಿ ತೀವ್ರ ರಕ್ತಗಾಯ ಪಡಿಸಿ ಕೊಲೆ ಮಾಡಿ ಸಾಕ್ಷಾದಾರಗಳನ್ನು ಮರೆ ಮಾಚುವ ಸಲುವಾಗಿ ಪೊದೆಗಳ ಮದ್ಯ ಮೃತ ದೇಹವನ್ನು ಮರೆಮಚಿರುತ್ತಾನೆ.

ಡಕಾಯತಿ: ಇಲ್ಲ      

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ             

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ      

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ    

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ 

ಹಲ್ಲೆ: ೦೧

  •     ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಬ್ಯಾಡಬೆಲೆ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೦-೧೧-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಬ್ಯಾಡಬೆಲೆ ಗ್ರಾಮದ ವಾಸಿ ಚೌಡಪ್ಪ ಮತ್ತು ಸಾಕಪ್ಪ ಎಂಬುವರು ಗ್ರಾಮದ ಅಶ್ವಥಕಟ್ಟೆಯ ಮೇಲೆ ಕುಳಿತಿದ್ದಾಗ ಅದೇ ಗ್ರಾಮದ ವಾಸಿಗಳಾದ ಪುನಿತ್, ಮುನಿಸ್ವಾಮಿ ಮತ್ತು ಕೃಷ್ಣಪ್ಪ ಎಂಬುವರುಗಳು ಅಶ್ವಥಕಟ್ಟೆಯ ಬಳಿ ಬಂದು ಚೌಡಪ್ಪನ್ನು ಉದ್ದೇಶಪೂರಕವಾಗಿ ಕೆಟ್ಟಮಾತರುಗಳಿಂದ ಜಾತಿ ನಿಂದನೆ ಮಾಡಿ ಒಂದು ಕಲ್ಲಿನಿಂದ ಮೊಣಕಾಲಿನ ಮೇಲೆ ಹೊಡೆದು ರಕ್ತ ಗಾಯಪಡಿಸಿರುತ್ತಾರೆ. 

ಇತರೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡಗಿ ಕಾಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೧೦-೨೦೦೮ ರಂದು ಕೆ.ಜಿ.ಎಫ್. ಆಂಡ್ರಸನ್‌ಪೇಟೆಯ ೨ನೇ ಬ್ಲಾಕ್ ವಾಸಿ ಶ್ರೀಮತಿ ರಮಾಭಾಯಿ ಕೋಂ ಸೌಂದರ್‌ರಾಜನ್ ಎಂಬುವರ ೧೬ ವರ್ಷದ ಹುಡಗಿಯನ್ನು ಕೆ.ಜಿ.ಎಫ್. ಆಂಡ್ರಸನ್‌ಪೇಟೆಯ ಸುಸೈಪಾಲ್ಯಾಂ ವಾಸಿ ಸೆಲ್ವಂ ಬಿನ್ ಸಿಗಾಮಣಿ ಎಂಬುವನು ಅಪಹರಣ ಮಾಡಿಕೊಂಡು ಹೋಗಿರುತ್ತಾನೆ ಇತ್ಯಾದಿ.  

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ   

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply