ದಿನದ ಅಪರಾಧಗಳ ಪಕ್ಷಿನೋಟ ೨೯ನೇ ನವಂಬರ್‌ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ 

ಮನೆಗಳ್ಳತನ: ಇಲ್ಲ 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ:  ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •             ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬ್ಯಾಟರಾಯನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀಮತಿ ರಾಜಮ್ಮ ಕೋಂ ಬಾಲಕೃಷ್ಣನಾಯ್ಡು(೪೫) ಇವರ ಮಗ ಮಂಜುನಾಥ ಬಿನ್‌ ಬಾಲಕೃಷ್ಣನಾಯ್ಡು(೨೮) ರವರೊಡನೆ ಸಂಸಾರದ ವಿಚಾರದಲ್ಲಿ ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದು, ದಿನಾಂಕ: ೨೭.೧೧.೨೦೦೮ ರಂದು ಮದ್ಯಾಹ್ನ ೦೧.೩೦ ಗಂಟೆ ಸಮಯದಲ್ಲಿ ಪನಃ ಗಲಾಟೆ ಮಾಡಿ ಒಂದು ದೊಣ್ಣೆಯಿಂದ ರಾಜಮ್ಮ ರವರ ಎಡ ಮೊಣಕೈ ಮೇಲೆ ಹೊಡೆದು ಗಾಯಪಡಿಸಿರುತ್ತಾನೆ.

ಇತರೆ: ಇಲ್ಲ  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೦೧

  •           ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಮೋಟಾರ್‍ ವಾಹನ ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಸೂರಜ್‌ ಮಲ್‌ ಸರ್ಕಲ್‌ ನಲ್ಲಿ ನಡೆದಿರುತ್ತದೆ. ದಿನಾಂಕ: ೨೯.೧೧.೨೦೦೮ ರಂದು ೨.೧೦ ಗಂಟೆ ಸಮದಯಲ್ಲಿ ಖಾಸಗಿ ಬಸ್‌ ಸಂಖ್ಯೆ ಕೆಎ-೫೩-೩೭೩೮ರ ವಾಹನ ಚಾಲಕ ಮಂಜುನಾಥ್‌ ಬಿನ್‌ ವೆಂಕಟಪ್ಪ(೩೫) ಮಿಂಡಹಳ್ಳಿ ರವರು ಬಸ್ಸನ್ನು ಅತಿವೇಗವಾಗಿ ರಸ್ತೆಯಲ್ಲಿ ಇತರೇ ವಾಹನಗಳೀಗೆ ಹಾಗೂ ಸಾರ್ವಜನಿಕರಿಗೆ ಡಿಕ್ಕಿ ಹೊಡೆಯುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದಿದ್ದು, ಪರಿಶೀಲಿಸಿ ಬಸ್ಸಿನ ಪರ್ಮಿಟ್‌ ಕೇಳಲಾಗಿ ಬೆಂಗಳೂರು-ಮುಳಬಾಗಿಲು ಮಾರ್ಗದ ಪರ್ಮಿಟ್‌  ಇರುವುದಾಗಿ ತಿಳಿಸಿದ್ದರಿಂದ ಪಂಚಾಯ್ತಿದಾರರ ಸಮಕ್ಷಮ ಬಸ್ಸನ್ನು ಅಮಾನತ್ತು ಪಡಿಸಿರುತ್ತದೆ.

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply