ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೫-೨೦೦೯ ರಂದು ಮದ್ಯಾಹ್ನ ೨-೦೦ ಗಂಟೆ ಸಮಯದಲ್ಲಿ ಕುಮಾರಿ ಆಸ್ಮಾ ತಬಸೂಮ್ ಬಿನ್ ಮುಷೀರ್ ಅಹ್ಮದ್, ಇಂಚಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ತನ್ನ ಟಿ.ವಿ.ಎಸ್. ಸ್ಕೂಟಿ ಪೆಪ್ ಸಂಖ್ಯೆ ಕೆಎ-೦೮-ಜೆ-೯೫೮೭ ವಾಹನದಲ್ಲಿ ಕಾಲೇಜುಕಡೆಯಿಂದ ಮನೆಗೆ ಬರಲು ಸ್ವರ್ಣ ಭವನದ ಬಳಿ ಬರುತ್ತಿದ್ದಾಗ ಎದರುಗಡೆಯಿಂದ ರಾಘವೇಣದ್ರ ಎಂಬಾತನು ತನ್ನ ಟಿ.ವಿ.ಎಸ್. ಚಾಂಪ್ ಸಂಖ್ಯೆ ಕೆಎ-೦೮-ಇ-೪೬೫೧ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸ್ಕೂಟಿ ಪೆಪ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಪೆಪ್ ಸವಾರಿಗೆ ಎಡ ಕಣ್ಣಿನ ಹುಬ್ಬಿನ ಬಳಿ ಹಾಗೂ ಎರಡು ಕೈಗಳ ಮೇಲೆ ರಕ್ತಗಾಯವಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೫-೨೦೦೯ ರಂದು ಬೆಳಿಗ್ಗೆ ೧೧-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಗರುಡಕೆಂಪನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಜಯಮ್ಮ ಎಂಬುವರ ಮಗ ಬಾಲಾಜಿಯು ಕುರಿಕಾಯಲು ಹೋದಾಗ ಅದೇ ಗ್ರಾಮದ ವಾಸಿ ಮುನಿರಾಜು ಎಂಬಾತನು ಆ ಹುಡುಗನನ್ನು ಹೊಡೆದಿದ್ದು, ಈ ವಿಚಾರವಾಗಿ ಜಯಮ್ಮ ಯಾಕೆ ನನ್ನ ಮಗನನ್ನು ಹೊಡೆದಿದ್ದು ಎಂದು ಮುನಿರಾಜು ರವರನ್ನು ಕೇಳಿದ್ದಕ್ಕೆ ವಿನಾಕಾರಣ ಜಯಮ್ಮನೊಂದಿಗೆ ಜಗಳ ತೆಗೆದು ಹೊಡೆದು ರಕ್ತಗಾಯಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


