ದಿನದ ಅಪರಾಧಗಳ ಪಕ್ಷಿನೋಟ ೩೧ ಜುಲೈ ೨೦೦೯

July 31, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ 

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ಇಲ್ಲ      

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೭-೦೭-೨೦೦೯ ರಂದು ಬಂಗಾರಪೇಟೆ ತಾಲೂಕು ಬೀರನಕುಪ್ಪ ಗ್ರಾಮದ ವಾಸಿ ಶ್ರೀಮತಿ. ನಿರ್ಮಲಾ ಕೋಂ ಲೇಟ್ ಆಂಥೋಣಿ ಎಂಬುವರು ಕೂಲಿ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಅದೇ ಗ್ರಾಮದ ವಾಸಿ ಲಕ್ಷ್ಮಯ್ಯ ಎಂಬುವನು  ನಿರ್ಮಲಾ ರವರ ಮಗಳನ್ನು ಮದುವೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಮನೆಯಿಂದ ಅಪಹರಿಸಿಕೊಂಡು ಹೋಗಿ ಅಕ್ರಮ ಸಂಬೋಗ ಮಾಡಿರುತ್ತಾನೆ ಇತ್ಯಾದಿ.         

 -ರಸ್ತೆ ಅಪಘಾತಗಳು: ೦೨

  -ಸಾಧಾರಣ: ೦೨

  •   ಬೆಮೆಲ್ ನಗರ ಪೊಲೀಸ್  ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೦-೦೭-೨೦೦೯ ರಂದು ರಾತ್ರಿ ೯-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಮೇಲ್ ಕೃಷ್ಣಾವರಂ ವಾಸಿ ಶ್ರೀ. ಮುನಿಸ್ವಾಮಿ ಎಂಬುವರು ತಮ್ಮ ಮನೆಗೆ ಹೋಗಲು ಬೆಮೆಲ್ ನ ಹೆಚ್ & ಪಿ  ಕಾರ್ಖಾನೆ ಮುಂದೆ ನಡೆದುಕೊಂಡು ಹೋಗುತ್ತಿದ್ದಾಗ ಹೆಂದೆಯಿಂದ ಲಗೇಜ್ ಆಟೋರಿಕ್ಷಾ ವಾಹನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮುನಿಸ್ವಾಮಿ ರವರಿಗೆ ಡಿಕ್ಕಿ ಹೊಡೆದು ರಕ್ತಗಾಯಪಡಿಸಿರುತ್ತಾನೆ ಇತ್ಯಾದಿ.
  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೦-೦೭-೨೦೦೯ ರಂದು ೧೭-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಮರದಘಟ್ಟ ಗ್ರಾಮದ ವಾಸಿ ಕುಮಾರಿ ಮಂಜುಳ ಬಿನ್ ವೆಂಕಟರಾಮರೆಡ್ಡಿ ಎಂಬುವಳು ತನ್ನ ಸೈಕಲ್ ಸವಾರಿ ಮಾಡಿಕೋಂಡು ಮನೆಗೆ ಹೋಗಲು ಮರದಘಟ್ಟ ಗ್ರಾಮದ ತಿರುವಿನಲ್ಲಿ ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿ ರಾಮಚಂದ್ರಪ್ಪ ಎಂಬುವನು ತನ್ನ ಟಿ.ವಿ.ಎಸ್ ದ್ವಿಚಕ್ರ ವಾಹನದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮಂಜುಳಾ ರವರಿಗೆ ಡಿಕ್ಕಿ ಹೊಡೆದು ರಕ್ತಗಾಯಪಡಿಸಿರುತ್ತಾನೆ ಇತ್ಯಾದಿ.

ಮೋಸ/ವಂಚನೆ ಪ್ರಕರಣಗಳು: ಇಲ್ಲ       

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಜುಲೈ ೨೦೦೯

July 30, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಡಕಾಯತಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೮-೦೭-೨೦೦೯ ರಂದು ೨೩-೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ರಾಬರ್ಟ್‌‌ಸನ್‌ಪೇಟೆ ವಾಸಿ ಶ್ರೀ. ಕರುಣಾಕರನ್ ಎಂಬುವರು ಕೆ.ಜಿ.ಎಫ್‌ಗೆ ಬರಲು ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ ಒಂದು ಟಾಟಾ ಇಂಡಿಗ ಕಾರ್‍  ಬಂದು ಕೆ.ಜಿ.ಎಫ್ ಹೋಗುತ್ತೇವೆ ಎಂದು ಹೇಳಿ ಕರುಣಾಕರನ್‌ ರವರನ್ನು ಅದರಲ್ಲಿ ಕುಳ್ಳರಿಸಿಕೊಂಡು ಹೋಗಿ ಬ್ಯಾಟರಾಯನ ಗ್ರಾಮದ ಬಳಿ ಅದರಲ್ಲಿದ್ದ ೩ ಜನರು ಆರೋಪಿಗಳು ಕರುಣಾಕರಣ್ ರವರನ್ನು ಮರಕ್ಕೆ ಕಟ್ಟಿ ಹಾಕಿ ಜೇಬಿನಲ್ಲಿದ್ದ ೧೭೦೦ ಮತ್ತು ಎ.ಟಿ.ಎಂ ಕಾರ್ಡ್‌‌ನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೮-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕು ಬೈನಪಲ್ಲಿ ಗ್ರಾಮದ ಕ್ರಾಸ್‌ ನಲ್ಲಿ ಅಳವಡಿಸಿದ್ದ ವಿದ್ಯೂತ್ ತ್ರಾನ್ಸ್‌ಫಾರಂನಲ್ಲಿದ್ದ ತಾಮರದ ಕಂಬಿ ಮತ್ತು ಇತರೆ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.    

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ         

 -ರಸ್ತೆ ಅಪಘಾತಗಳು: ೦೧

  -ಸಾಧಾರಣ: ೦೧

  •   ಉರಿಗಾಂ ಪೊಲೀಸ್  ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೮-೦೭-೨೦೦೯ ರಂದು ೨೦-೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ರಾಬರ್ಟ್‌‌ಸನ್‌ಪೇಟೆ, ಅಂಬೇಡ್ಕರ್‍ ನಗರದ ವಾಸಿ ಕರುಣಾ ಎಂಬುವನು ಮಾರ್ಕೆಟ್ ನಿಂದ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಎದರುಗಡೆಯಿಂದ ಒಂದು ದ್ವಿಚಕ್ರ ವಾಹನ ಸವಾರ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಕರುಣಾರವರಿಗೆ ಡಿಕ್ಕಿ ಹೊಡೆದು ರಕ್ತಗಾಯಪಡಿಸಿ ಸ್ಥಳದಿಂದ ಪರಾರಿಯಾಗಿರುತ್ತಾರೆ ಇತ್ಯಾದಿ.

ಮೋಸ/ವಂಚನೆ ಪ್ರಕರಣಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾನೆಯಲ್ಲಿ ವಂಚನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೮-೦೭-೨೦೦೯ ರಿಂದ ೨೯-೦೭-೨೦೦೯ ರ ಮದ್ಯ ಬಂಗಾರಪೇಟೆ ತಾಲೂಕು ಬೆಂಗನೂರು ಗ್ರಾಮದ ವಾಸಿ ಶ್ರೀಮತಿ. ಗಂಗೂಜಮ್ಮ ಕೋಂ ನಾಗರಾಜ ಎಂಬುವರನ್ನು ಅದೇ ಗ್ರಾಮದ ವಾಸಿಗಳಾದ ರವಿಚಂದ್ರನ್ ಮತ್ತು ಇತರೆ ೪ ಜನರು ಸೇರಿಕೊಂಡು ಹೆಚ್ಚಿಗೆ ಬಡ್ಡಿ ಆಸೆ ತೋರಿಸಿ ಗಂಗೂಜಮ್ಮ ರವರ ಬಳಿ ಹಣ ಪಡೆದು ಮೋಸ ಮಾಡಿರುತ್ತಾರೆ ಇತ್ಯಾದಿ.     

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೯-೦೭-೨೦೦೯ ರಂದು ೧೯-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಆಂಡ್ರಸನ್‌ಪೇಟೆಯ ೨ನೇ ಬ್ಲಾಕ್ ವಾಸಿ ಶ್ರೀಮತಿ. ಜಯಮ್ಮ ಎಂಬುವರ ಮಗಳಾದ ಶಿರಿಷಾ ೧೦ ವರ್ಷದವಳನ್ನು ಅದೇ ಕೇರಿಯ ಮಣಿದನ್ ಎಂಬುವನು ಚುಡಾಯಿಸಿ ಬೆಲ್ಟ್ ನಿಂದ ಹೊಡೆದು ಗಾಯಪಡಿಸಿರುತ್ತಾನೆ ಇತ್ಯಾದಿ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ    

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಜುಲೈ ೨೦೦೯

July 29, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ಇಲ್ಲ   

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ         

 -ರಸ್ತೆ ಅಪಘಾತಗಳು: ೦೧

  -ಸಾಧಾರಣ: ೦೧

  •   ಬೆಮೆಲ್ ನಗರ ಪೊಲೀಸ್  ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೭-೦೭-೨೦೦೯ ರಂದು ಸಂಜೆ ೭-೪೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಬೆಮೆಲ್ ನಗರ ೩ನೇ ಟೈಫ್, ಮೆನೆ ಸಂಖ್ಯೆ ೯೪ ರ ವಾಸಿ ಶ್ರೀ. ಬಿ.ಎಸ್.ನಂಜುಂಡಯ್ಯ ಎಂಬುವರು ಕೆ.ಜಿ.ಎಫ್ ಬಂಗಾರಪೇಟೆ ಮುಖ್ಯ ರಸ್ತೆ ಕೆನರಾ ಬ್ಯಾಂಕ್ ಮುಂಭಾಗ ವಸಂತನಗರದ ಬಳಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದರುಗಡೆಯಿಂದ ದ್ವಿಚಕ್ರವಾಹನ ಸಂಖ್ಯೆ ಕೆಎ-೦೨-ಇಡಬ್ಲೂ-೬೦೩೦ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ನಂಜುಂಡಯ್ಯ ರವರಿಗೆ ಡಿಕ್ಕಿ ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಬ್ಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೮-೦೭-೨೦೦೯ ರಂದು ಮದ್ಯಾಹ್ನ ೨-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕಾಮಸಮುದ್ರಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೆಬಲ್ ೭೮   ಶ್ರೀ. ಬನಾಲಪ್ಪ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯಿಂದಿಗೆ ಕಾಮಸಮುದ್ರಂ ಹೋಬಳಿ ತಮಟಮಾಕನಹಳ್ಳಿ ಗ್ರಾಮದ ಆರೋಪಿ ಗುರಪ್ಪ ಎಂಬುವರು ತಮ್ಮ ಮನೆಯ ಹಿಂಭಾಗ ತಿಪ್ಪೆಯ ಬಳಿ ಯಾವುದೇ ಪರವಾನಿಗಿ ಇಲ್ಲದೆ ಅಕ್ರಮವಾಗಿ ೧೦ ಲೀಟರ್‍ ಕಳ್ಳಭಟ್ಟಿ ಸಾರಾಯಿಯನ್ನು ಪ್ಲಾಸ್ಟಿಕ್ ಕ್ಯಾನ್‌ನಲ್ಲಿ ಇಟ್ಟುಕೊಂಡಿದ್ದವನನ್ನು ಮುಂದಿನ ಕ್ರಮಕ್ಕಾಗಿ ದಸ್ತಗಿರಿ ಮಾಡಿ ಠಾಣೆಗೆ ಕರೆತಂದಿರುತ್ತಾರೆ ಇತ್ಯಾದಿ.  

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧ ಪಕ್ಷಿನೋಟ ೨೬ನೇ ಜುಲೈ ೨೦೦೯

July 26, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ೦೧

  •   ರಾಬಟ್‌ನಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೭-೨೦೦೯ ರಂದು ರಾತ್ರಿ ಯರನಗಾನಹಳ್ಳಿ ಗ್ರಾಮದ ಶ್ರೀ. ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಸ್ಥಾನದ ಬಾಗಿಲನ್ನು ಯಾರೋ ಕಳ್ಳುರು ಮುರಿದು ದೇವರ ಮೇಲಿದ್ದ ಹಾಗೂ ಬಿರುನಲ್ಲಿಟ್ಟಿದ್ದ ಸುಮಾರು ರೂ. ೨,೪೭,೦೦೦/-ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. 

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •           ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ರಾಬರ್ಟ್‌ಸನ್‌ಪೇಟೆಯ ಅಂಬೇಡ್ಕರ್‌ ನಗರದ ವಾಸಿಯಾದ ಶ್ರೀಮತಿ. ಕೆ. ಮಂಜುಳಾದೇವಿ ಕೋಂ ಪ್ರೇಮ್‌ಕುಮಾರ್‌ ರವರ ಪತಿಯಾದ ಪ್ರೇಮ್‌‌ಕುಮಾರ್‌, ಷಣ್ಮುಗಂ, ಧನಲಕ್ಷ್ಮಿ, ಚಿತ್ರ ಎಂಬುವರುಗಳು ಈಗಾಗಲೇ ಕೊಟ್ಟಿರುವ ವರದಕ್ಷಿಣೆ ಸಾಲದೆಂದು ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಾ ದಿನಾಂಕ: ೨೨.೦೭.೨೦೦೯ ರಂದು ರಾತ್ರಿ ೧೦.೦೦ ಗಂಟೆ ಸಮಯದಲ್ಲಿ ಮಂಜುಳಾ ರವರನ್ನು ಕೊಲೆ ಮಾಡುವ ಉದ್ದೇಶದಿಂದ ಒಂದು ರೂಮಿನಲ್ಲಿ ಕೂಡಿಹಾಕಿ ಸೀಮೆಎಣ್ಣೆ ಮೈಮೇಲೆ ಸುರಿದು ಬೆಂಕಿ ಇಟ್ಟು ಸಾಯಿಸಲು ಹತ್ಯೆ ಪ್ರಯತ್ನ ಮಾಡಿರುತ್ತಾರೆ.

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

  -ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ೦೧

  •         ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ಕೊಲೆಗೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮಾರಿಕುಪ್ಪಂನ ಪಂಡಾರಂಲೈನ್‌ನಲ್ಲಿ ನಡೆದಿರುತ್ತದೆ. ಶ್ರೀಮತಿ. ಸಂತಾನಂ ಮೇರಿ ಕೋಂ ಮೊಹನ್‌ರಾಜ್‌, ಪಂಡಾರಂ ಲೈನ್‌ ವಾಸಿ ರವರಿಗೆ ಸೇರಿದ ಮನೆಯ ಅಡಿಪಾಯವನ್ನು ಅದೇ ಕೇರಿಯ ಭಾಗ್ಯಲಕ್ಷ್ಮಿ, ಕಾಮರಾಜ್‌, ರಾಜನ್‌ ಮತ್ತು ಭಾಸ್ಕರನ್‌ ರವರುಗಳು ಕೇಡವಿ ನಾಶಪಡಿಸಿದ್ದರಿಂದ ರೂ. ೧೦,೦೦೦.೦೦ ಗಳು ನಷ್ಟವಾಗಿದ್ದು ಅದನ್ನು ಕೇಳಲಾಗಿ ಜಗಳ ಮಾಡಿ ಪ್ರಾಣ ಬೆದರಿಕೆ ಹಾಕಿ ಕೊಲೆ ಮಾಡಲು ಪ್ರಯತ್ನಿಸಿರುತ್ತಾರೆ.

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ೦೧

  •           ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ತಂಗೇಡಿಮಿಟ್ಟ ಕೊತ್ತಿಂಡ್ಲು ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೫.೦೭.೨೦೦೯ ರಂದು ಬೆಳಿಗ್ಗೆ ಸುಮಾರು ೧೧.೩೦ ಗಂಟೆಯಲ್ಲಿ ತಂಗೇಡಿಮಿಟ್ಟ ಮಜರಾ ಕೊತ್ತಿಂಡ್ಲು ಗ್ರಾಮದ ಸರ್ಕಾರಿ ಬೋರ್‌ವೆಲ್‌ ಬಳಿ ಇದೇ ಗ್ರಾಮದ ಸವಿತಾ ಎಂಬುವರು ಮತ್ತು ಲಕ್ಷ್ಮಿ ಕೋಂ ನಾರಾಯಣಪ್ಪ ರವರುಗಳು ಸಿ.ಸಿ. ಕ್ಯಾಸೆಟ್‌ಗಳ ಬಗ್ಗೆ ಜಗಳ ಮಾಡಿಕೊಂಡು ಕೆಟ್ಟಮಾತುಗಳನ್ನು ಮಾತನಾಡಿ ಲಕ್ಷ್ಮಿ ರವರು ಸವಿತಾ ರವರಿಗೆ ಒಂದು ಕಲ್ಲಿನಿಂದ ಕೆನ್ನೆಯ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಡ ೨೩ನೇ ಜುಲೈ ೨೦೦೯

July 23, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೭-೨೦೦೯ ರಂದು ರಾತ್ರಿ ಕೆ.ಜಿ.ಎಫ್ ವಾಸಿ ಜಾನ್ ಮತ್ತು ಇತರರು ಸೇರಿಕೊಂಡು ಬಂಗಾರಪೇಟೆ ತಾಲೂಕು ಬಿಸಾನತ್ತಮ್ಮನ ಅರಣ್ಯ ಪ್ರದೇಶದಲ್ಲಿ ಸುಮಾರು ರೂ. ೧೫,೦೦೦/- ಗಳ ಬೆಲೆ ಬಾಳುವ ಅರಕಳಿ ಫಾರಂ ಮರಗಳನ್ನು ಅಕ್ರಮವಾಗಿ ಕಟಾವು ಮಾಡಿ ಸಾಗಿಸುತ್ತಿದ್ದವರನ್ನು ಬಿ.ಜಿ.ಎಂ.ಎಲ್ ಸೆಕುರಿಟಿ ಗಾರ್ಡ್‌‌ಗಳು ದಸ್ತಿಗಿರಿ ಮಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ ಇತ್ಯಾದಿ.

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

  -ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೨ನೇ ಜುಲೈ ೨೦೦೯

July 22, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೪-೨೦೦೮ ರಂದು ಮಂಜುನಾಥ ಬಿನ್ ನಾರಾಯಣಪ್ಪ ಎಂಬುವರು ರಾಜಶೇಖರ ರೆಡ್ಡಿ ಬಿನ್ ಲೇಟ್‌ ಕೃಷ್ಣರೆಡ್ಡಿ, ಯರನಾಗನಹಳ್ಳಿ ಗ್ರಾಮ ರವರ ಮಗಳನ್ನು ಅಪಹರಿಸಿಕೊಂಡು ಹೋಗಿ ಮದುವೆ ಮಾಡಿಕೊಂಡು, ಅಂದಿನಿಂದ ಆಕೆಗೆ ಮಂಜುನಾಥ ಮತ್ತು ಇತರೆ ನಾಲ್ಕು ಜನರು ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಹೊಡೆದು ಆಸ್ಪತ್ರೆಯಲ್ಲಿ ಪ್ರಸವಕ್ಕೆಂದು ದಾಖಲಿಸಿ ಕೊಲೆ ಮಾಡಿ ಸಾಯಿಸಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ಇಲ್ಲ

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

  -ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೧ನೇ ಜುಲೈ ೨೦೦೯

July 21, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ಇಲ್ಲ

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಬೇತಮಂಗಳ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ೧೧ ವರ್ಷಗಳ ಹಿಂದೆ ಕೋಲಾರದ ಗಾಂಧಿನಗರದ ವಾಸಿ ಶ್ರೀಮತಿ.ಲಕ್ಷ್ಮಮ್ಮ ರವರ ಮಗಳಾದ ಸುಮಾ ಎಂಬುವಳನ್ನು ಬಂಗಾರಪೇಟೆ ತಾಲೂಕು, ಬೇತಮಂಗಳ ಪೊಲೀಸ್ ಠಾಣೆ ಸರಹದ್ದಿನ ಸುವರ್ಣಹಳ್ಳಿ ಗ್ರಾಮದ ಸೋಮಶೇಖರ್‍ ಬಿನ್ ಮುನಿಯಪ್ಪ ಎಂಬುವರಿಗೆ ಮದುವೆ ಮಾಡಿಕೊಟ್ಟಿದ್ದು ಅಂದಿನಿಂದ ಇಂದಿನವರೆಗೆ ಸುಮಾ ರವರಿಗೆ ಆಕೆಯ ಗಂಡ ವರದಕ್ಷಣೆ ಕಿರುಕುಳ & ದೈಹಿಕ ಕಿರುಕುಳ ನೀಡುತ್ತಿದ್ದು, ದಿನಾಂಕ: ೧೬-೦೭-೨೦೦೯ ರಂದು ಸುಮಾ ಮತ್ತು ಆಕೆಯ ಮಗ ಮನೆಯ ಕೊಠಡಿಯಲ್ಲಿ ಮಲಗಿದ್ದಾಗ ಆಕೆಯ ಗಂಡ ಸೋಮಶೇಖರ್‍ ಸೀಮೇ ಎಣ್ಣೆ ಸುರಿದು ಕೊಠಡಿಗೆ ಬೀಗ ಹಾಕಿಕೊಂಡು ಓಡಿ ಹೋಗಿದ್ದು, ಪಕ್ಕದ ಮನೆಯವರು ಸುಮಾಳನ್ನು ಆರ್‍.ಎಲ್. ಜಾಲಪ್ಪ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಪಲಕಾರಿಯಾಗದೆ ಸುಮಾರವರು ದಿನಾಂಕ: ೨೦-೦೭-೨೦೦೯ ರಂದು ಮೃತಪಟ್ಟಿರುತ್ತಾರೆ ಇತ್ಯಾದಿ. 

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

  -ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕೋಟಾ ನೋಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೩-೦೧-೨೦೦೯ ರಿಂದ ೦೨-೦೭-೨೦೦೯ ರ ಮಧ್ಯೆ ಯಾರೋ ಅಪರಿಚಿತ ವ್ಯಕ್ತಿಗಳು ರಾಬರ್ಟ್‌‌ಸನ್‌ಪೇಟೆಯ ಎಸ್.ಬಿ.ಎಂ ಬ್ಯಾಂಕಿಗೆ ೧೦೦೦ ರೂ ಮುಖ ಬೆಲೆಯ ೩ ನೋಟುಗಳನ್ನು ನೀಡಿರುತ್ತಾರೆ ಇತ್ಯಾದಿ.      

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಳಾಗಿರುತ್ತದೆ. ದಿನಾಂಕ: ೧೫-೦೭-೨೦೦೯ ರಂದು ಬಂಗಾರಪೇಟೆ ತಾಲೂಕು, ಬೇತಮಂಗಲ ಪೊಲೀಸ್ ಠಾಣೆ ಸರಹದ್ದು ಐಸಂದ್ರ ಮಿಟ್ಟೀರು ಗ್ರಾಮದ ವಾಸಿ ಶ್ರೀಮತಿ. ಮುನಿಯಮ್ಮ ಕೋಂ ನಾರಾಯಣಸ್ವಾಮಿ ಎಂಬುವರ ೧೬ ವರ್ಷದ ಮಗಳು ರಾತ್ರಿ ಮನೆಯಲ್ಲಿ ಮಲಗಿದ್ದು, ಸುಮಾರು ರಾತ್ರಿ ೧೧-೦೦ ಗಂಟೆ ಸಮಯದಲ್ಲಿ ನೋಡಲಾಗಿ ಆಕೆಯು ಮನೆಯಲ್ಲಿ ಕಾಣೆದೆ ಕಾಣೆಯಾಗಿರುತ್ತಾಳೆ ಇತ್ಯಾದಿ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೬ನೇ ಜುಲೈ ೨೦೦೯

July 16, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೬-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ಇಲ್ಲ

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಹಿಂದೆ ದಿನಾಂಕ: ೨೯-೧೧-೨೦೦೭ ರಂದು ಕೆ.ಜಿ.ಎಫ್ ಮಾರಿಕುಪ್ಪಂನ ಆನ್‌ಕಾಕ್ಸ್ ಲೈನ್ ವಾಸಿ ಶ್ರೀಮತಿ. ಶಶಿಕಲಾ ಮತ್ತು ಶ್ರೀಕುಮಾರ್‍ ಎಂಬುವರಿಗೆ ಮದುವೆಯಾಗಿದ್ದು, ಅಂದಿನಿಂದ ದಿನಾಂಕ: ೧೫-೦೭-೨೦೦೯ ರ ವರೆಗೆ ಆಕೆಯ ಗಂಡ ಶ್ರೀಕುಮಾರ್‍ ಮತ್ತು ಆತನ ಮನೆಯವರು ಶಶಿಕಲಾ ರವರಿಗೆ ತವರುಮನೆಯಿಂದ ವರದಕ್ಷಣೆಯನ್ನು ತರುವಂತೆ ಮಾನಸಿ ಕಿರುಕುಳ ನೀಡುತ್ತಿದ್ದಾರೆ ಎಂತ ಶಶಿಕಲಾರವರು ಠಾಣೆಯಲ್ಲಿ ದೂರು ನೀಡಿರುತ್ತಾಳೆ. 

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ 

  -ಸಾಧಾರಣ: ಇಲ್ಲ 

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

 ಇತರೆ: ಇಲ್ಲ    

ಹಲ್ಲೆ: ೦೧

ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ  ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೭-೨೦೦೯ ರಂದು ೧೭-೦೦ ಗಂಟೆ ಸಮಯದಲ್ಲಿ ಆಂಡ್ರಸನ್‌ಪೇಟೆಯ ಬಿ.ಎಂ.ರಸ್ತೆ ವಾಸಿ ಶ್ರೀ. ಅರುಣ್ ಬಿನ್ ಸುಂದರಮೂರ್ತಿ ಎಂಬುವರ ಬಳಿ  ರಾಬರ್ಟ್‌‌ಸನ್‌ಪೇಟೆ, ಆಂಗ್ಲೋ ಇಂಡಿಯನ್‌ ಕಾಲೋನಿ ವಾಸಿಗಳಾದ ದೀಪಕ್ ಮತ್ತು ಮೋಹನ್ ಎಂಬುವರುಗಳು ವಿನಾಕಾರಣ ಜಗಳ ತೆಗೆದು ಕೈಗಳಿಂದ ಗುದ್ದಿ ಮೈನೋವುಂಟು ಮಾಡಿ ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೫ನೇ ಜುಲೈ ೨೦೦೯

July 15, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೫-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ಇಲ್ಲ

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಹಿಂದೆ ೩ ವರ್ಷಗಳ ಹಿಂದೆ ಕೆ.ಜಿ.ಎಫ್ ರಾಬರ್ಟ್‌‌ಸನ್‌ಪೇಟೆ ಅಂಗ್ಲೋ ಇಂಡಿಯನ್‌ ಕಾಲೋನಿ ವಾಸಿ ಸರವಣ ಮತ್ತು ಎಲ್.ಬೀನಾ ಪೆಟ್ರೋನಲ ಎಂಬುವರಿಗೆ ಮದುವೆಯಾಗಿದ್ದು ಆಗಿನಿಂದ ಸರವಣ ರವರು ಈ ವರೆಗೆ ವರದಕ್ಷಣೆಯನ್ನು ತರಲು ಎಲ್.ಬೀನಾ ಪೆಟ್ರೋನಲ ರವರನ್ನು ಕಿರುಕುಳ ನೀಡುತ್ತಿದ್ದು ದಿನಾಂಕ: ೧೧-೦೭-೨೦೦೯ ರಂದು ಸರವಣ ಮತ್ತು ಇತರೆ ೬ ಜನ ಸೇರಿಕೊಂಡು ಎಲ್.ಬೀನಾ ಪೆಟ್ರೋನಲ ರವರನ್ನು ಒಂದು ರಾಡಿನಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

  -ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೦೭-೨೦೦೯ ರಂದು ೧೭-೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೆಬಲ್ ೧೩೧ ಶ್ರೀ. ಅಂಜದ್ ಪಾಶ  ಎಂಬುವರು ಗ್ರಾಮದ ಗಸ್ತಿನಲ್ಲಿದ್ದಾಗ ಬೆಂಗನೂರು ಗ್ರಾಮದ ಬಳಿ ಕೆ.ಜಿ.ಎಫ್ ಬಂಗಾರಪೇಟೆ ಮುಖ್ಯ ರಸ್ತೆಯಲ್ಲಿ ಲಾರಿ ಸಂಖ್ಯೆ ಕೆಎ-೦೮-೪೦೬೩ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದ್ವಚಕ್ರ ವಾಹನ ಸಂಖ್ಯೆ ಕೆಎ-೦೩-೨೨೦೪ ಗೆ ಡಿಕ್ಕಿ ಹೊಡೆಸಿದ ಪರಿಣಾಮ ದ್ವಚಕ್ರ ವಾಹನ ಚಾಲಕನ ಕಾಲು ತುಂಡಾಗಿರುತ್ತದೆ ಇತ್ಯಾದಿ.

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ದೂರು ಪ್ರತಿ ದೂರು ಪ್ರಕರಣ ದಾಖಲಾಗಿರುತ್ತದೆ. ಸುಮಾರು ವರ್ಷಗಳಿಂದ ಬಂಗಾರಪೇಟೆ ತಾಲೂಕು ಮಾಗೇರಿ ಗ್ರಾಮದ ವಾಸಿ ಚೆನ್ನಕೇಶವ ಮತ್ತು ಅಶೋಕ ಎಂಬುವರುಗಳಿಗೆ ಜಮೀನು ವಿಚಾರವಾಗಿ ಹಳೆಯ ವೈಶ್ಯವಿದ್ದು ದಿನಾಂಕ: ೧೪-೦೭-೨೦೦೯ ರಂದು ಬೆಳಿಗ್ಗೆ ೦೯-೦೦ ಗಂಟೆ ಸಮಯದಲ್ಲಿ  ಅಶೋಕ ಮತ್ತು ಇತರೆ ೪ ಜನರು ಅಕ್ರಮ ಕೂಟ ಕಟ್ಟಿಕೊಂಡು ಬಂದು ಚೆನ್ನಕೇಶವ ರವರನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.

ಇತರೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದಕ್ಕೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೭-೨೦೦೯ ರಂದು ಬೆಳಿಗ್ಗೆ ೧೦-೧೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೆಬಲ್ ೨೮೭ ಶ್ರೀ.ಕೃಷ್ಣಮೂರ್ತಿ ಎಂಬುವರು ಗೀತಾರಸ್ತೆಯಲ್ಲಿ ಸಂಚಾರಿ ಕರ್ತವ್ಯದಲ್ಲಿದ್ದಾಗ ರಾಬರ್ಟ್‌‌ಸನ್‌ಪೇಟೆ ವಾಸಿ ಸುರೇಶ್ ಎಂಬುವರು ತಮ್ಮ ಮಾರುತಿ ಕಾರ್‍ ಸಂಖ್ಯೆ ಕೆಎ-೦೧-ಎಂಎ-೨೮೫೬ ಅನ್ನು ರಸ್ತೆಯಲ್ಲಿ ನಿಲ್ಲಿಸುತ್ತಿದ್ದಾಗ ಕಾನ್ಸ್‌ಟೆಬಲ್  ಆ ಸ್ಥಲಕ್ಕೆ ದಾವಿಸಿ ಇಲ್ಲಿ ವಾಹನ ನಿಲ್ಲಿಸ ಬಾರದು ಎಂದು ಹೇಳಿದರೂ ಸಹ ಸುರೇಶ್ ರವರು ಪೊಲೀಸರ ಮಾತನ್ನು ಕೇಳದೆ ವಾಹನವನ್ನು ಅಲ್ಲಿಯೇ ನಿಲ್ಲಿಸಿ ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಅಡ್ಡಿ ಪಡಿಸಿರುತ್ತಾರೆ ಇತ್ಯಾದಿ.

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೪ನೇ ಜುಲೈ ೨೦೦೯

July 14, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ಇಲ್ಲ

 ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೦-೦೭-೨೦೦೯ ರಿಂದ ೧೩-೦೭-೨೦೦೯ ರ ಮದ್ಯೆ ಶ್ರೀಮತಿ. ಹಂಸವೇಣಿ ಕೋಂ ಜಯಕುಮಾರ‍್, ನಂ. ೩೫/ಡಿ, ೧ನೇ ಮೈನ್ ರೋಡ್, ಶ್ರೀರಾಮಪುರ, ಬೆಂಗಳೂರು ಎಂಬುವರನ್ನು ಜಯರಾಮ್ ಎಂಬುವರೊಂದಿಗೆ ಬಂಗಾರಪೇಟೆಯಲ್ಲಿ ಮೊದುವೆಯಾಗಿದ್ದು, ಗಂಡ ಮತ್ತು ಆಕೆಯ ನಾದನಿಯವರುಗಳು ಸೇರಿ ಹಂಸವೇಣಿಯನ್ನು ಇನ್ನೂ ವರದಕ್ಷಣೆ ಹೆಚ್ಚಾಗಿ ತರಲು ಕಿರುಕುಳ ನೀಡುತ್ತಿದ್ದಾರೆ ಎಂದು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ ಇತ್ಯಾದಿ.

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

  -ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೩-೦೭-೨೦೦೯ ರಂದು ಬೆಳಿಗ್ಗೆ ೦೯-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಗುಟ್ಟಹಳ್ಳಿ ಗ್ರಾಮದಲ್ಲಿ ಕಸದ ತಿಪ್ಪೆ ಹಾಕುವ ವಿಷಯವಾಗಿ ರಾಮಪ್ಪ ಮತ್ತು ಇತರೆ ೪ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ತಿಮ್ಮತಾಯಪ್ಪ ಬಿನ್ ಕೊಂಡಪ್ಪ, ಗುಟ್ಟಹಳ್ಳಿ ಎಂಬುವರನ್ನು ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.   

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಜೂಜಾಟದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೦೭-೨೦೦೯ ರಂದು ೧೫೦೦ ಗಂಟೆಯಲ್ಲಿ ಪಿ.ಎಸ್.ಐ., ಬಂಗಾರಪೇಟೆ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯವರೊಂದಿಗೆ ದೇಶಿಹಳ್ಳಿ ಬಳಿ ಅಂದರ್‌ಬಾಹರ್‌ ಜೂಜಾಟ ಆಡುತ್ತಿದ್ದವರ ವಿರುದ್ಧ ದಾಳಿ ನಡೆಸಿ, ಶಿವಪ್ಪ ಮತ್ತು ಇತರೆ ೩ ಜನರನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಲಾಗಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.