ದಿನದ ಅಪರಾಧಗಳ ಪಕ್ಷಿನೋಟ ೪ನೇ ಜುಲೈ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೩-೦೭-೨೦೦೯ ರಂದು ಬೆಳಿಗ್ಗೆ ೧೧೦೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಸಿ.ಡಿ.ಪಿ.ಓ ಕಛೇರಿಯ ಪುಷ್ಪಲತಾ ಎಂಬುವರು ಬಂಗಾರಪೇಟೆಯ ಆಸ್ಪತ್ರೆಯ ಮುಂಭಾಗ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಪುಷ್ಪಲತಾರವರ ಗಮನವನ್ನು ಬೇರೆಡೆಗೆ ಸೆಳೆದು ಬ್ಯಾಗ್ ನಲ್ಲಿದ್ದ ರೂ. ೨೪,೦೦೦/- ಗಳನ್ನು ಮತ್ತು ಮೂರು ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆ ಇತ್ಯಾದಿ.  

ವಾಹನ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೩-೦೭-೨೦೦೯ ರಂದು ಬಂಗಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೆಬಲ್ ೧೭೧ ಶ್ರೀ. ಅಪ್ಪೋಜಿರವರು ವಿಷೇಶ ಗ್ರಾಮ ಗಸ್ತಿನಲ್ಲಿರುವಾಗ ಬೆಂಗಳೂರಿನ ಅನ್ನಸಂದ್ರಪಾಳ್ಯ, ಯಲ್ಲಮ್ಮ ರಸ್ತೆ, # ೧೦೪ ವಾಸಿ ವೆಂಕಟೇಶ ಬಿನ್ ವೆಂಕಟಪ್ಪ ಎಂಬುವನು ಅನುಮಾನಸ್ಬದವಾಗಿ ಬೂದಿಕೋಟೆಯಲ್ಲಿ ಒಂದು ಹಿರೋ ಹೊಂಡಾ ವಾಹನ ಸಂಖ್ಯೆ ಯುಪಿ-ವೈ೨-೭೫೭೪ರಲ್ಲಿ ಬರುತ್ತಿದ್ದು ಅದನ್ನು ಪರಿಶೀಲಿಸಲಾಗಿ ಆ ವಾಹನಕ್ಕೆ ಯಾವುದೇ ದಾಖಲಾತಿಗಳಿಲ್ಲದ ಕಾರಣ ಮುಂದಿನ ಕ್ರಮಕ್ಕಾಗಿ ಠಾಣೆಗೆ ತಂದಿರುತ್ತಾರೆ ಇತ್ಯಾದಿ.

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೭-೨೦೦೯ ರಂದು ಮದ್ಯಾಹ್ನ ೧-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲ್ಲೂಕು ಬೇತಮಂಗಲ ಹೋಬಳಿ ಜಂಗಮನಹಳ್ಳಿ ಗ್ರಾಮದ ವಾಸಿ ವೆಂಕಟರಾಮರೆಡ್ಡಿ ರವರನ್ನು ಆತನ ತಮ್ಮ ಯಾವುದೋ ಹಸುವಿನ ವಿಚಾರವಾಗಿ ಜಗಳಮಾಡಿಕೊಂಡು ಪೆಟ್ರೋಲ್ ಸುರಿದು ಸಾಯಿಸಲು ಪ್ರಯತ್ನಿಸಿರುತ್ತಾರೆ ಇತ್ಯಾದಿ.

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

  ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply