ದಿನದ ಅಪರಾಧಗಳ ಪಕ್ಷಿನೋಟ ೨೧ನೇ ಆಗಸ್ಟ್ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೮-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ 

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ 

 -ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ        

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಂಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೮-೨೦೦೯ ರಂದು ೧೨-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕೊಂಗರಹಳ್ಳಿ ಗ್ರಾಮದ ವಾಸಿ ಶ್ರೀ. ಶ್ರೀನಿವಾಸರೆಡ್ಡಿ ಮತ್ತು ಆತನ ಹೆಂಡತಿ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಅವರ ಪಕ್ಕದ ಜಮೀನಿನವರಾದ ಪ್ರಭಾಕರರೆಡ್ಡಿ ಎಂಬುವರು  ೪ ಜನರೊಂದಿಗೆ  ಅಕ್ರಮ ಕೂಟ ಕಟ್ಟಿಕೊಂಡು ಕೈಗಳಲ್ಲಿ ಚನಿಕೆ ಹಾರೆಗಳನ್ನು ಹಿಡಿದುಕೊಂಡು ಬಂದು ಜಗಳ ತೆಗೆದು ಕೆಟ್ಟ ಮಾತುಗಳಿಂದ ಬೈದು ಚನಿಕೆಯಿಂದ ಶ್ರೀನಿವಾಸರೆಡ್ಡಿ ರವರಿಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.        

ಇತರೆ: ಇಲ್ಲ    

ಹಲ್ಲೆ: ೦೧

  •   ರಾಬರ್ಟ್‌‌ನಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೮-೨೦೦೯ ರಂದು ರಾತ್ರಿ ೯-೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಚಾಂಪಿಯನ್‌ರೀಪ್ಸ್, ಎಲ್ ಬ್ಲಾಕ್ ವಾಸಿ ಶ್ರೀ. ಮಣಿ  ಎಂಬುವರು ರಾಬರ್ಟ್‌‌ಸನ್‌ಪೇಟೆಯಲ್ಲಿರು ಭುವನೇಶ್ವರಿ ಬಾರ್‍ ಮುಂಭಾಗ ಬರುತ್ತಿರುವಾಗ ಅನ್ಬು  ಎಂಬುವರು ತನ್ನ ಸ್ನೇಹಿತರೊಂದಿಗೆ ಗುಂಪು ಕಟ್ಟಿಕೊಂಡು ಮಣಿರವರೊಂದಿಗೆ ವಿನಾಕಾರಣ ಜಗಳ ಕಾದು ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ

 ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply