ಕೆ.ಜಿ.ಎಫ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ದಸರಾ ಉತ್ಸವ

September 29, 2009

DSC02149

 

  •   ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ವಸತಿ ಗೃಹಗಳ ಆವರಣದಲ್ಲಿ ನೆಲೆಗೊಂಡಿರುವ  ಶ್ರೀ. ಚಾಮುಂಡೇಶ್ವರಿ ಅಮ್ಮನವರ  ದಸರ ಉತ್ಸವ ಕಾರ್ಯಕ್ರಮಗಳು ದಿನಾಂಕ: ೨೧-೦೯-೨೦೦೯ ರಿಂದ ೨೮-೦೯-೨೦೦೯ ರವರೆಗೆ ಪ್ರತಿ ದಿವಸ ಅಮ್ಮನವರಿಗೆ ಅಭಿಷೇಕ ಪೂಜಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದಿದ್ದು, ಈ ಪೂಜಾ ಕಾರ್ಯಕ್ರಮಕ್ಕೆ ಕೆ.ಜಿ.ಎಫ್ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರು ಪ್ರೋತ್ಸಾಹ ನೀಡಿ ಯಶಸ್ವಿಗೊಳಿಸಿರುತ್ತಾರೆ.
  • ದಿನಾಂಕ: ೨೮-೦೯-೨೦೦೯ ರಂದು ವಿಜಯದಶಮಿ ಅಂಗವಾಗಿ ದೇವಾಲಯದಲ್ಲಿ ಮಧ್ಯಾಹ್ನ ಪೂಜೆ ಮತ್ತು ಪ್ರಸಾದ ವಿನಿಯೋಗ ಕಾರ್ಯಕ್ರಮ ನೆರವೇರಿದ್ದು, ಸಂಜೆ ಅಮ್ಮನವರ ಮೆರವಣಿಗೆಯನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಸತಿ ಗೃಹಗಳ ಸಮ್ಮುಚ್ಚಯದಲ್ಲಿ ನೆರೆವೇರಿದ್ದು ಈ ಕಾರ್ಯ ಕ್ರಮವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಶ್ರೀ. ದೇವಜ್ಯೋತಿ ರೇ, ಐ.ಪಿ.ಎಸ್ ರವರು ನೆರವೇರಿಸಿರುತ್ತಾರೆ.

ಕೆ.ಜಿ.ಎಫ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಬ್ಯಾಂಡ್

September 29, 2009

 KGF POLICE BAND 

  •   ಕೆ.ಜಿ.ಎಫ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಬ್ಯಾಂಡ್ ಸಿಬ್ಬಂದಿಯವರು ದಿನಾಂಕ: ೧೮-೦೯-೨೦೦೯ ರಿಂದ ೨೮-೦೯-೨೦೦೯ ರವರೆಗೆ ಮೈಸೂರಿನಲ್ಲಿ ನಡೆದ ದಸರಾ ಉತ್ಸವದಲ್ಲಿ ಉತ್ತಮವಾಗಿ ವಾದ್ಯಗೋಷ್ಠಿ ನುಡಿಸಿ ರಾಜ್ಯ ಮಟ್ಟದಲ್ಲಿ ೨ ನೇ ಸ್ಥಾನ ಪಡೆದುಕೊಂಡಿರುತ್ತಾರೆ. ಸದರಿ ಸಿಬ್ಬಂದಿಯನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ದೇವಜ್ಯೋತಿ ರೇ, ಐ.ಪಿ.ಎಸ್ ರವರು ಶ್ಲಾಘಿಸಿರುತ್ತಾರೆ.

ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಸೆಪ್ಟೆಂಬರ್‌ ೨೦೦೯

September 27, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •          ಆಂಡ್ರಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಮನೆಗಳ್ಳತನ್ನಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಆಂಡ್ರಸನ್‌ಪೇಟೆ ಪೊಲೀಸ್‌ ಠಾಣೆ ಸರಹದ್ದು ಬೆನ್ನಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೪.೦೯.೨೦೦೯ ರಂದು ರಾತ್ರಿ ೯.೦೦ ಗಂಟಯಿಂದ ೧೦.೦೦ಗಂಟೆಯೊಳಗೆ ಇದೆ ಗ್ರಾಮದ ವಾಸಿ ಸುಬ್ಬಮ್ಮ ವೆಂಕಟಸ್ವಾಮಿ ಎಂಬುವರ ಮನೆಯ ಬಾಗಿಲು ತೆರೆದಿದ್ದು, ಯಾರೋ ಆಸಾಮಿ ಮನೆಯೊಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ  ನಗದು ರೂ. ೧೦೦೦೦.೦೦ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಇದೇ ಗ್ರಾಮದ ಶಿವ ಎಂಬುವರ ಮೇಲೆ ಗುಮಾನಿ ಇರುತ್ತದೆಂದು ತಿಳಿಸಿರುತ್ತಾರೆ.

ಸಾಧಾರಣ ಕಳ್ಳತನ: ೦೧

  •         ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ಸಾದಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಮಾಳಿಯಾಲಿ ಲೈನ್‌ ಮಾರಿಕುಪ್ಪಂನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೦.೦೯.೨೦೦೯ ರಂದು ರಾತ್ರಿ ಯಾರೋ ಕಳ್ಳರು ಮಾಲಿಯಾಲಿ ಲೈನನಲ್ಲಿ ದೂರವಾಣಿ ಇಲಾಖೆಗೆ ಸೇರಿದ ಭೂಮಿಯಲ್ಲಿದ್ದ ೨೦ ಮೀಟರ್‌ ದೂರವಾಣಿ ಕೇಬಲ್‌ನ್ನು ಕಳವು ಮಾಡಿಕೊಂಡಿ ಹೋಗಿರುತ್ತಾರೆ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ -

ರಸ್ತೆ ಅಪಘಾತಗಳು: ಇಲ್ಲ -

ಮಾರಣಾಂತಿಕ: ಇಲ್ಲ -ಸಾಧಾರಣ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

 ದೊಂಬಿ: ಇಲ್ಲ

ಇತರೆ:೦೧

  •          ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಅಕ್ರಮ ತಡೆಗೆ ಸಂಭಂಧಿಸಿದಂತೆ ಅಪರಾದ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೋಲಾರ ಬಂಗಾರಪೇಟೆ ಮುಖ್ಯ ರಸ್ತೆ ಎಸ್‌.ಎನ್‌ ರೇಸಾರ್ಟ್‌ ಬಳಿ ಸಂಭವಿಸಿರುತ್ತದೆ. ಪಾರ್ವತಮ್ಮ ಕೋಂ ಆಂಜನೇಯಲು ಕೈಗಲ್‌ ಗ್ರಾಮ, ಪಲಮನೇರು ತಾಲೂಕು ಎಂಬುವರು ೫ ಲಕ್ಷ ಸಾಲ ಮಾಡಿದ್ದು, ಅದನ್ನು ತೀರಿಸಲಾಗದೆ ಇದ್ದ ಕಾರಣ ನಾಗೇಶ್‌ ಬೆಂಗಳೂರು ಎಂಬುವರು ಪಾರ್ವತಮ್ಮ ರವರನ್ನು ಬಂಗಾರಪೇಟೆ ಒಂದು ಮನೆಯಲ್ಲಿ ಕೂಡಿಹಾಕಿದ್ದರಿಂದ ದಿನಾಂಕ: ೨೬.೦೯.೨೦೦೯ ರಂದು ಬೆಳಿಗ್ಗೆ ೩.೦೦ ಗಂಟೆ ಸಮಯದಲ್ಲಿ ಇವರ ಗಂಡನಾದ ಆಂಜನೇಯಲು ರವರು ತನ್ನ ಪಂಚೆಯಿಂದ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾನೆ. ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ -

ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ನೇ ಸೆಪ್ಟೆಂಬರ್‍ ೨೦೦೯

September 24, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೯-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕು ವೇಣುಗೋಪಾಲಪುರ ಗ್ರಾಮದ ಸರ್ಕಾರಿ ಶಾಲೆಯ ಬೀಗ ಮುರಿದು ಶಾಲೆ ಒಳಗೆ ಇರುವ ಗ್ಯಾಸ್ ಸಿಲಿಂಡರ್‍ ಮತ್ತು ಅಡಿಗೆ ಪಾತ್ರೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೯-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೀಮಹಾನಹಳ್ಳಿ ಗ್ರಾಮದ ಉರ್ದು ಶಾಲೆ ಶಿಕ್ಷಕ ಶ್ರೀ. ಮಹಮ್ಮದ್ ಆಲಿ ಎಂಬುವರು ಹುಡಿಗಿಯನ್ನು ಚುಡಾಗಿಸಿದ ವಿಚಾರವಾಗಿ ಅದೇ ಗ್ರಾಮದ ಸೈಯದ್ ಮತ್ತು ಇತರೆ ೧೧ ಜನ ಅಕ್ರಮ ಕೂಟ ಕಟ್ಟಿಕೊಂಡು ಬಂದು ಶಿಕ್ಷಕನನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ಹಲ್ಲೆ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೮-೨೦೦೯ ರಿಂದ ೨೩-೦೯-೨೦೦೯ ರವರೆಗೆ  ಬಂಗಾರಪೇಟೆ ತಾಲೂಕು ಬೀಮಹಾನಹಳ್ಳಿ ಗ್ರಾಮದ ಉರ್ದು ಶಾಲೆ ಶಿಕ್ಷಕ ಶ್ರೀ. ಮಹಮ್ಮದ್ ಆಲಿ ಎಂಬುವರು ಅದೇ ಶಾಲೆಯ ವಿದ್ಯಾರ್ಥಿನಿಯ ಕೈಯನ್ನು ಹಿಡಿದು ಎಳೆದಾಡಿ ಮದುವೆ ಮಾಡಿಕೊ ಎಂದು ಪೀಡಿಸಿರುತ್ತಾನೆ ಇತ್ಯಾದಿ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ      

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

 ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ನೇ ಸೆಪ್ಟೆಂಬರ್‍ ೨೦೦೯

September 23, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೦೯-೨೦೦೯ ರಂದು ೧೬೦೦ ಗಂಟೆಯಿಂದ ೨೨-೦೯-೨೦೦೯ ರಂದು ೦೮೦೦ ಗಂಟೆ ಮಧ್ಯೆದಲ್ಲಿ ಬೆಮೆಲ್‌ ಆಫೀಸರ್‍ಸ್‌ ವಸತಿ ಗೃಹಗಳ ವಸತಿ ಸಂಖ್ಯೆ: ಬಿ.೯೨ ರಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ಮನೆಯಲ್ಲಿದ್ದ ವಿವಿಧ ರೀತಿಯ ಒಟ್ಟು ೧೪೭ ಗ್ರಾಂ.ನಷ್ಟಿನ ಬಂಗಾರದ ಒಡವೆಗಳು, ೫೦೦ ಗ್ರಾಂ.ನಷ್ಟಿನ ಬೆಳ್ಳಿಯ ಒಡವೆಗಳು ಎಲ್ಲಾ ಒಟ್ಟು ಸುಮಾರು ೧,೭೨,೦೦೦/- ಗಳ ಬೆಲೆ ಬಾಳುವ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. 

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ 

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ೦೩

ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ೦೩ ಪ್ರಕರಣಗಳು ದಾಖಲಾಗಿದ್ದು, ಅವು ಕೆಳಗಿನಂತಿವೆ.

  •   ದಿನಾಂಕ ೨೨-೦೯-೨೦೦೯ ರಂದು ೦೮೦೦ ಗಂಟೆಯಲ್ಲಿ ಆಂಡ್ರಸನ್‌ಪೇಟೆ, ಬಿ.ಎಂ.ರಸ್ತೆಯಲ್ಲಿ ಒಂದು ಹುಡುಗಿಯ ವಿಚಾರದಲ್ಲಿ ಅಪ್ಪೇನ್‌, ಲೂರ್ದನಗರ ಎಂಬುವರು ಲಿಯೋ ಬಿನ್ ಥಾಮಸ್‌, ನಂ. ೨೯, ಭಾರತೀಪುರಂ, ಆಂಡ್ರಸನ್‌ಪೇಟೆ ರವರೊಂದಿಗೆ ಜಗಳ ಕಾದು ಹೊಡೆದು ರಕ್ತಗಾಯಪಡಿಸಿರುತ್ತಾನೆ.
  •   ದಿನಾಂಕ ೨೨-೦೯-೨೦೦೯ ರಂದು ೨೧೦೦ ಗಂಟೆಯಲ್ಲಿ ಆಂಡ್ರಸನ್‌ಪೇಟೆ ಲೂರ್ದನಗರದಲ್ಲಿ ಮಕ್ಕಳು ಮನೆಯ ಮುಂದೆ ಆಟವಾಡುತ್ತಿದ್ದ ವಿಚಾರವಾಗಿ ರಾಬರ್ಟ್‌, ಲೂರ್ದನಗರ ಎಂಬುವರು ನಂದಿನಿ ಕೋಂ ಜಾನ್‌ಕೆನಡಿ, ವಯಸ್ಸು ೨೩ ವರ್ಷ, ಲೂರ್ದನಗರ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರೊಂದಿಗೆ ಜಗಳ ಕಾದು ಹೊಡೆದು ರಕ್ತಗಾಯಪಡಿಸಿ ಮತ್ತು ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
  •   ದಿನಾಂಕ ೨೨-೦೯-೨೦೦೯ ರಂದು ೨೨೩೦ ಗಂಟೆಯಲ್ಲಿ ಬಿ.ಎಂ.ರಸ್ತೆ, ಆಂಡ್ರಸನ್‌ಪೇಟೆಯಲ್ಲಿ ಹಣಕಾಸಿನ ವಿಚಾರವಾಗಿ ಸಿಕಂದರ್‌ ಮತ್ತು ಜಾನ್‌, ೨ನೇ ಬ್ಲಾಕ್‌, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರುಗಳು ಜಲಾಲ್‌ ಬಿನ್ ಉಸ್ಮಾನ್‌, ವಯಸ್ಸು ೪೧ ವರ್ಷ, ಭಾರತೀಪುರಂ, ಆಂಡ್ರಸನ್‌ಪೇಟೆ, ಕೆ.ಜಿ.ಎಫ್. ರವರೊಂದಿಗೆ ಜಗಳ ಮಾಡಿ ಹೊಡೆದು ರಕ್ತಗಾಯಪಡಿಸಿ, ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ      

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಸಂಭವಿಸಿರುವುದಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೯-೨೦೦೯ ರಂದು ೧೬೩೦ ಗಂಟೆಯಲ್ಲಿ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಶ್ರೀನಾಥ್‌ ಬಿನ್ ರಾಮಚಂದ್ರಪ್ಪ, ವಯಸ್ಸು ೧೮ ವರ್ಷ ಎಂಬುವರಿಗೆ ಸಿಡಿಲು ಬಡಿದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿರುತ್ತಾನೆ.

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೨ನೇ ಸೆಪ್ಟೆಂಬರ್‍ ೨೦೦೯

September 22, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೯-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆಯ ಮುಖ್ಯಪೇದೆ ೮೯ ಶ್ರೀ. ಮುನಿಯಪ್ಪ ಮತ್ತು ಪೊಲೀಸ್ ಪೇದೆ ೨೨೫ ಎಂಬುವರುಗಳು ಬಂಗಾರಪೇಟೆಯ ದೇಶಿಹಳ್ಳಿ ರೈಲ್ವೆ ಗೇಟ್ ಬಳಿ ಗಸ್ತಿನಲ್ಲಿರುವಾಗ ಅಂಬ್ರೀಷ್ ಎಂಬುವನು ಅನುಮಾನಸ್ಪದವಾಗಿ ದ್ವಿಚಕ್ರವಾಹನವನ್ನು ಹೋಡಿಸುತ್ತಿದ್ದವನ್ನು ನಿಲ್ಲಿಸಿ ವಿಚಾರಸಿದಾಗ ಅದು ಕಳವು ಮಾಡಿರುವ ವಾಹನವೆಂದು ತಿಳಿಸಿರುತ್ತಾನೆ ಇತ್ಯಾದಿ.

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೨

  •   ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ಸುಮಾರು ೬ ವರ್ಷಗಳ ಹಿಂದೆ ಕೆ.ಜಿ.ಎಫ್, ಚಾಂಪಿಯನ್‌ರೀಫ್ಸ್, ಎಸ್.ಟಿ ಬ್ಲಾಕ್ ವಾಸಿಯಾದ ಉಮಾ ಎಂಬುವರು ರಾಜ್‌ಶೇಖರ್‍ @ ದಾಸ್ ಎಂಬುವರೊಂದಿಗೆ ಮದುವೆಯಾಗಿದ್ದು, ಮೂರು ಮಕ್ಕಳಿದ್ದು, ಆಗಿನಿಂದ ಉಮಾರವರಿಗೆ ಗಂಡ ಮತ್ತು ಆತನ ಮನೆಯವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದು ದಿನಾಂಕ: ೨೧-೦೯-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಇಲ್ಲಸಲ್ಲದ ಅಪವಾದ ಹೊರಿಸಿ ಹೊಡೆದಿರುತ್ತಾರೆ ಇತ್ಯಾದಿ.
  • ಬೇತಮಂಗಲ ಪೊಲೀಸ್ ಠಾಣೆಯಲ್ಲಿ   ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೯-೨೦೦೯ ರಂದು ೧೪೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ವಡ್ಡಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರು ತನ್ನ ಪತ್ನಿಯಾದ ಶ್ರೀಮತಿ. ಸುಶೀಲಮ್ಮ ಎಂಬುವರನ್ನು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿರುತ್ತಾರೆ ಇತ್ಯಾದಿ.  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೯-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಹಳೇಪಾಳ್ಯದ ವಾಸಿ ಅನಿಲ್‌ಕುಮಾರ್‍ ಎಂಬುವನು ಬಂಗಾರಪೇಟೆ ತಾಲೂಕು ಎಸ್.ಜಿ ಕೋಟೆ ಸಾಯಿಬಾಬ ಆಶ್ರಮದ ಬಳಿ ತನ್ನ ಟಾಟಾ ಸುಮೋ ಸಂಖ್ಯೆ ಕೆಎ-೦೫-ಎಂ.ಎನ್-೨೩೬೭ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮರಕ್ಕೆ ಡಿಕ್ಕಿಹೊಡೆದು ವಾಹನ ಉರುಳಿ ಬಿದ್ದುರುತ್ತದೆ ಇತ್ಯಾದಿ.        

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ೦೨

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಳ್ಳೆಗೆ ಸಂಬಂಧಿಸಿದಂತೆ ಕೇಸು ಪ್ರತಿಕೇಸು ದಾಖಲಾಗಿರುತ್ತದೆ. ದಿನಾಂಕ: ೨೧-೦೯-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬಂಡಾರಲಹಳ್ಳಿಯಲ್ಲಿ ಜಮೀನು ವಿಚಾರವಾಗಿ ಅದೇ ಗ್ರಾಮದ ರಾಮಚಂದ್ರರೆಡ್ಡಿ ಬಿನ್ ಮುನಿರೆಡ್ಡಿ ಎಂಬುವರಿಗೂ ಮತ್ತು ಲಕ್ಷ್ಮಣ್‌ರೆಡ್ಡಿ ಬಿನ್ ಪಿಳ್ಳಾರೆಡ್ಡಿ ಎಂಬುವರುಗಳು ಜಗಳ ಮಾಡಿಕೊಂಡಿರುತ್ತಾರೆ ಇತ್ಯಾದಿ.
  • ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೯-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕೆಂಪಾಪುರ ಗ್ರಾಮದ ವಾಸಿ ಶ್ರೀ. ವೆಂಕಟೇಶ ಶೆಟ್ಟಿ ಬಿನ್ ಕೃಷ್ಣಪ್ಪ ಎಂಬುವರನ್ನು ಅದೇ ಗ್ರಾಮದ ವಾಸಿ ವೆಂಕಟರಾಮಶೇಟ್ಟಿ ಮತ್ತು ಇತರೆ ಇಬ್ಬರು ಸೇರಿಕೊಂಡು ಜಮೀನು ವಿಚಾರವಾಗಿ ಜಗಳತೆಗೆದು ಕೈಗಳಿಂದ ಹೊಡೆದಿರುತ್ತಾರೆ ಇತ್ಯಾದಿ.  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೆ.ಜಿ.ಎಫ್, ಉರಿಗಾಂಪೇಟೆ ವಾಸಿ ದೇವರಾಜ್  ಎಂಬುವನು ನಿರುದ್ಯೋಗಿ ಆಹಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ: ೨೧-೦೯-೨೦೦೯ ರಂದು ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾನೆ ಇತ್ಯಾದಿ.            

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೧ ನೇ ಸೆಪ್ಟೆಂಬರ್‍ ೨೦೦೯

September 21, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ೦೨

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಕೇಸು, ಪ್ರತಿಕೇಸು ದಾಖಲಾಗಿರುತ್ತದೆ. ದಿನಾಂಕ ೨೦-೦೯-೨೦೦೯ ರಂದು ೧೮೩೦ ಗಂಟೆಯಲ್ಲಿ ಶ್ರೀ ಅಬ್ದುಲ್‌ ಖಾದರ್‌ ಬಿನ್ ಅಬ್ದುಲ್‌, ಹಳೆ ಅಂಚೆ ಕಛೇರಿ ರಸ್ತೆ, ಆಂಡ್ರಸನ್‌ಪೇಟೆ ರವರು ಮತ್ತು ಮುಜೀಬ್‌ಭಾಷ ಬಿನ್ ಅಜೀಮ್‌ಭಾಷ, ಬಿ.ಎಂ.ರಸ್ತೆ, ಆಂಡ್ರಸನ್‌ಪೇಟೆ ರವರು ಆಂಡ್ರಸನ್‌ಪೇಟೆ ಪೊಲೀಸ್ ಠಾಣೆ ಸರಹದ್ದು ಜಾಮಿಯಾ ಮಸೀದಿ ಸಮೀಪ ಬಳಿ ವಿನಾ ಕಾರಣ ಒಬ್ಬರಿಗೊಬ್ಬರು ಬೈದಾಡಿ, ಕೈಗಳಿಂದ ಹೊಡೆದಾಡಿರುವ ಬಗ್ಗೆ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೮ನೇ ಸೆಪ್ಟೆಂಬರ್‍ ೨೦೦೯

September 18, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ          

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೬-೦೯-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಶ್ರೀನಿವಾಸಪುರ ಗ್ರಾಮದ ವಾಸಿ ದೇವೇಂದ್ರ ಎಂಬುವನು ತನ್ನ ಹಿರೋ ಹೊಂಡ ವಾಹನ ಸಂಖ್ಯೆ ಕೆಎ-೫೩-ಇ-೩೪೨೧ ರಲ್ಲಿ ವಿ-ಕೋಟೆಯಿಂದ ತನ್ನ ಗ್ರಾಮಕ್ಕೆ ಬರುವಾಗ ಸಂದಘಟ್ಟ ಗ್ರಾಮದ ಕ್ರಾಸ್ ಬಳಿ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಒಂದು ಮೈಲು ಕಲ್ಲಿಗೆ ಡಿಕ್ಕಿ ಹೊಡೆದು ಕೆಳಕ್ಕೆ ಬುದ್ದು ರಕ್ತಗಾಯಗಳಾಗಿ ಮೃತ ಪಟ್ಟಿರುತ್ತಾನೆ ಇತ್ಯಾದಿ.

  -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ        

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೭ನೇ ಸೆಪ್ಟೆಂಬರ್‍ ೨೦೦೯

September 17, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ          

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

  -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೬-೦೯-೨೦೦೯ ರಂದು ೦೭೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಐಮಾಸಪುರ ಗ್ರಾಮದಲ್ಲಿ ಜಮೀನಿನ ವಿಚಾರವಾಗಿ ನಾರಾಯಣಸ್ವಾಮಿ ಬಿನ್ ಚನ್ನಾರೆಡ್ಡಿ ಮತ್ತು ಇತರೆ ೫ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಅದೇ ಗ್ರಾಮದ ವಾಸಿ ಶ್ರೀಮತಿ. ನಾರಾಯಣಮ್ಮ ಕೋಂ ರಾಮಯ್ಯ ಎಂಬುವರೊಂದಿಗೆ ಜಗಳ ತೆಗೆದು ಹೊಡೆದು ಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ        

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೪ನೇ ಸೆಪ್ಟೆಂಬರ್‍ ೨೦೦೯

September 14, 2009

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ಸುಮಾರು ೬ ವರ್ಷಗಳ ಹಿಂದೆ ಬಂಗಾರಪೇಟೆ ತಾಲೂಕು ಚಿಕ್ಕವಲಗಮಾದಿ ಗ್ರಾಮದ ವಾಸಿ ಮುನಿವೆಂಕಟಪ್ಪ ರವರ ಮಗಳಾದ ಸರೋಜಮ್ಮ ಎಂಬುವಳನ್ನು ಕರಮಾನಹಳ್ಳಿ ಗ್ರಾಮದ ವಾಸಿ ಪ್ರಕಾಶ್ ಬಿನ್ ರಾಮಯ್ಯ ಎಂಬುವರಿಗೆಕೊಟ್ಟು ಮದುವೆ ಮಾಡಿಕೊಟ್ಟಿದ್ದು, ಪ್ರಕಾಶ್ ರವರು ಆಕೆಗೆ ದೈಹಿಕ ಹಿಂಸೆ ನೀಡಿ  ದಿನಾಂಕ: ೧೦-೦೯-೨೦೦೯ ರಂದು ೧೦-೦೦ ಗಂಟೆ ಸಮಯದಲ್ಲಿ ನೇಣು ಹಾಕಿ ಕೊಲೆ ಮಾಡಿರುವುದಾಗಿ ದೂರು.          

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

  -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೮-೨೦೦೯ ರಂದು ಬಂಗಾರಪೇಟೆ ತಾಲೂಕು ಕೊಂಗರಹಳ್ಳಿ ಗ್ರಾಮದ ವಾಸಿ ಶ್ರೀ. ಶ್ರೀನಿವಾಸರೆಡ್ಡಿ ಬಿನ್ ಗೋಪಾಲಪ್ಪ ಎಂಬುವರ ಜಮೀನಿನಲ್ಲಿದ್ದ ಕಲ್ಲುಗಳನ್ನು ಕೀಳಲು ಅದೇ ಗ್ರಾಮದ ಪ್ರಭಾಕರ ಮತ್ತು ಇತರೆ ೪ ಜನರು ಅಕ್ರಮ ಕೂಟ ಕಟ್ಟಿಕೊಂಡು ಬಂದು ಶ್ರೀನಿವಾಸರೆಡ್ಡಿ ರವರನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ.         

ಇತರೆ: ಇಲ್ಲ

ಹಲ್ಲೆ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೨-೦೯-೨೦೦೯ ರಂದು ೧೭-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಹಾರಮಾನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಎತ್ತುಗಳನ್ನು ಕಟ್ಟಿ ಹಾಕಿರುವ ವಿಷಯವಾಗಿ ಮುನಿವೆಂಕಟಪ್ಪ, ನಾಗಮ್ಮ ಎಂಬುವರುಗಳು ಅದೇ ಗ್ರಾಮದ ಜಯಪ್ಪ ಎಂಬುವರೊಂದಿಗೆ ಜಗಳ ತೆಗೆದು ಗುದ್ದಲಿಯಿಂದ ಹೊಡೆದು ರಕ್ತಗಾಯ ಪಡಿಸಿರುತ್ತಾರೆ.  

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ        

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.