ದಿನದ ಅಪರಾಧಗಳ ಪಕ್ಷಿನೋಟ ೦೩ನೇ ಸೆಪ್ಟೆಂಬರ್‌ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

 -ಸಾಧಾರಣ: ಇಲ್ಲ       

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೦೯-೨೦೦೯ ರಂದು ೧೭೦೦ ಗಂಟೆಯಲ್ಲಿ ಜಮೀನು ವಿಚಾರದಲ್ಲಿ ಚಲಪತಿ ಬಿನ್ ಲೇಟ್‌ ವೆಂಕಟಪ್ಪ ಎಂಬುವರು ಸೀನಪ್ಪ ಬಿನ್ ವೆಂಕಟಪ್ಪ, ಕಳ್ಳಿಕುಪ್ಪ ಗ್ರಾಮ ರವರೊಂದಿಗೆ ಜಗಳವಾಡಿ ಒಂದು ಮಚ್ಚಿನಿಂದ ಹೊಡೆದು ರಕ್ತಗಾಯಪಡಿಸಿರುತ್ತಾನೆ ಮತ್ತು ಪ್ರಾಣ ಬೆದರಿಕೆ ಹಾಕಿರುತ್ತಾನೆ. ಈ ಘಟನೆಯು ಕಳ್ಳಿಕುಪ್ಪ ಗ್ರಾಮದಲ್ಲಿ ನಡೆದಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: 01

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೮-೨೦೦೯ ರಂದು ೧೧೦೦ ಗಂಟೆಯಲ್ಲಿ ಕು: ಮಾಲತಿ, ವಯಸ್ಸು ೨೩ ವರ್ಷ, ಎಂ.ಎಲ್.ಬ್ಲಾಕ್‌, ಉರಿಗಾಂ, ಕೆ.ಜಿ.ಎಫ್. ರವರು ಮನೆ ಬಿಟ್ಟು ಹೋದವಳು ಮತ್ತೆ ಮನೆಗೆ ವಾಪಸ್ಸಾಗದೆ ಕಾಣೆಯಾಗಿರುತ್ತಾಳೆ.

 ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೯ ರಿಂದ ೦೨-೦೯-೨೦೦೯ರ ಮಧ್ಯೆ ಮುನಿವೆಂಕಟಪ್ಪ, ವಯಸ್ಸು ೬೫ ವರ್ಷ, ಕರಡಗೂರು ಗ್ರಾಮ ರವರು ತನ್ನ ಜೀವನದಲ್ಲಿ ಜಿಗುಪ್ಸೆಗೊಂಡು ಒಂದು ಮರಕ್ಕೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.  ಈ ಕೃತ್ಯವು ಕರಡಗೂರು ಗ್ರಾಮದಲ್ಲಿ ನಡೆದಿರುತ್ತದೆ.   

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply