ದಿನದ ಅಪರಾಧಗಳ ಪಕ್ಷಿನೋಟ ೦೨ನೇ ಡಿಸೆಂಬರ್‍ ೨೦೧೦

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೨-೧೨-೨೦೧೦ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

-ಕೊಲೆ: ಇಲ್ಲ

-ಡಕಾಯತಿ: ಇಲ್ಲ

-ಸುಲಿಗೆ: ಇಲ್ಲ

-ಮನೆಗಳ್ಳತನ: ಇಲ್ಲ

-ಸಾಧಾರಣ ಕಳ್ಳತನ:  ಇಲ್ಲ

-ವಾಹನ ಕಳ್ಳತನ: ಇಲ್ಲ

-ಅಪಘಾತಗಳು: ೦೧

- ಸಾಧಾರಣ: ಇಲ್ಲ

- ಮಾರಣಾಂತಿಕ: ೦೧

  • ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೧೧-೨೦೧೦ ರಂದು ಬೆಳೀಗ್ಗೆ ೧೧.೩೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಬಾಬು ವೇ ಬ್ರಿಡ್ಜ್ ನಲ್ಲಿ ಲಾರಿ ಸಂಖ್ಯೆ: ಕೆಎ-೦೭-೯೧೪೫ ರಲ್ಲಿ ನೀಲಗಿರಿ ಮರಗಳ ತೂಕ ಮಾಡುತ್ತಿದ್ದಾಗ ಮೃತ ವೆಂಕಟೇಶ್ ಲಾರಿಯ ಮೇಲೆ ಹತ್ತಿ ಮರಗಳನ್ನು ಸರಿ ಪಡಿಸುತ್ತಿರುವಾಗ ಲಾರಿ ಚಾಲಕ ಲಾರಿಯನ್ನು ನಿರ್ಲಕ್ಷತೆಯಿಂದ ಚಲಾಯಿಸಿದ್ದರಿಂದ ಲಾರಿ ಮೇಲಿದ್ದ ವೆಂಕಟೇಶ್‌ರವರು ಕಾಲು ಜಾರಿ ಬಿದ್ದು, ಲಾರಿಯಲ್ಲಿದ್ದ ಮರಗಳು ಆತನ ಮೇಲೆ ಬಿದ್ದ ಪ್ರಯುಕ್ತ ಆತನು ಲಾರಿಯಿಂದ ಕೆಳಕ್ಕೆ ಬಿದ್ದು, ರಕ್ತ ಗಾಯಗಳಾಗಿ ಚಿಕಿತ್ಸೆ ಸಲುವಾಗಿ ಕೋಲಾರ – ಬೆಂಗಳೂರು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: ೦೧-೧೨-೨೦೧೦ ರಂದು ಬೆಳಿಗ್ಗೆ ೬.೦೦ ಗಂಟೆಯಲ್ಲಿ ಬೆಂಗಳೂರಿನ ಉದ್ಬವ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

-ಮೋಸ/ವಂಚನೆ ಪ್ರಕರಣಗಳು: ಇಲ್ಲ

-ಕೊಲೆಗೆ ಪ್ರಯತ್ನ: ಇಲ್ಲ

-ದೊಂಬಿ: ಇಲ್ಲ

-ಅಪಹರಣ: ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

-ಹಲ್ಲೆ: ಇಲ್ಲ

-ಇತರೆ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು:  ಇಲ್ಲ

-ಅಸ್ವಾಭಾವಿಕ ಮರಣ : ೦೨

  • ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೨-೧೧-೨೦೧೦ ರಂದು ರಾತ್ರಿ ೮.೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಸಕ್ಕನಹಳ್ಳಿ ಗ್ರಾಮದ ವಾಸಿ ಶ್ರೀ. ರಘುನಾಥ ರೆಡ್ಡಿ ರವರು ಮೂತ್ರ ವಿಸರ್ಜನೆಗೆ ಮನೆಯಿಂದ ಹೊರಗೆ ಬಂದು ಮೂತ್ರ ವಿಸರ್ಜನೆ ಮಾಡುತ್ತಿರುವಾಗ ಯಾವುದೋ ವಿಷ ಪೂರಿತ ಹಾವು ಆತನ ಪಾದಕ್ಕೆ ಕಚ್ಚಿದ್ದು  ಚಿಕಿತ್ಸೆಗಾಗಿ ಬಂಗಾರಪೇಟೆ – ಕೋಲಾರದ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಪಲಕಾರಿಯಾಗದೆ ದಿನಾಂಕ: ೦೧-೧೨-೨೦೧೦ ರಂದು ಮೃತ ಪಟ್ಟಿರುತ್ತಾರೆ.
  • ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೧೨-೨೦೧೦ ರಂದು ಬೆಳಿಗ್ಗೆ ೩.೦೦ ಗಂಟೆ ಸಮಯದಲ್ಲಿ ಪಿರ್ಯಾದಿಯಾದ ಶ್ರೀ. ಪಾಪಣ್ಣ ಬಿನ್ ಪಾಪಯ್ಯ ಶೆಟ್ಟಿ, ಬೂದಿಕೋಟೆ ಗ್ರಾಮ, ಬಂಗಾರಪೇಟೆ ತಾಲೂಕು ಎಂಬುವರ ಹೆಂಡತಿಯಾದ ಮೃತ ಶ್ರೀಮತಿ.ರಾಮಕ್ಕರವರು ಮಲ ವಿಸರ್ಜನೆಗೆ ಹೋಗಿ ದೇವಸ್ಥಾನದ ಮುಂಭಾಗದಲ್ಲಿರುವ ಕಾವೇರಮ್ಮ ಬಾವಿ ಕಲ್ಯಾಣಿಯಲ್ಲಿ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುತ್ತಾರೆ ಇತ್ಯಾದಿ.

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು: ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

 

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Connecting to %s

Follow

Get every new post delivered to your Inbox.